Webdunia - Bharat's app for daily news and videos

Install App

ಸಿಎಂ ಸ್ಥಾನದಿಂದ ಮೋದಿಯನ್ನ ಇಳಿಸದಂತೆ ಅಡ್ವಾಣಿಗೆ ಹೇಳಿದ್ದ ಬಾಳಾಠಾಕ್ರೆ

Webdunia
ಸೋಮವಾರ, 2 ಮೇ 2022 (18:08 IST)
ಗುಜರಾತ್‌ನ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರನ್ನು ಗೋಧ್ರೋತ್ತರ ಹಿಂಸಾಚಾರಗಳ ಹಿನ್ನೆಲೆಯಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಬೇಡಿಕೆ ಬಂದಾಗ ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.
 
ಮೋದಿ ಅವರನ್ನು ಬೆಂಬಲಿಸಿದ್ದರು' ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಭಾನುವಾರ ಹೇಳಿದ್ದಾರೆ.
 
ಮರಾಠಿ ದೈನಿಕ 'ಲೋಕಸತ್ತಾ'ಗೆ ನೀಡಿದ ಸಂದರ್ಶನದಲ್ಲಿ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ. 'ಬಿಜೆಪಿ ದಿಗ್ಗಜ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಪ್ರಧಾನಿಯಾಗಿದ್ದಾಗ ಮೋದಿ ಅವರನ್ನು ಗುಜರಾತ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಬೇಡಿಕೆ ಜೋರಾಗಿತ್ತು. ಅದೇ ಅವಧಿಯಲ್ಲೇ ಮತ್ತೊಬ್ಬ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರು ಸಮಾವೇಶವೊಂದರಲ್ಲಿ ಭಾಗವಹಿಸಲೆಂದು ಮುಂಬೈಗೆ ಬಂದಿದ್ದರು. ಮೋದಿ ಅವರನ್ನು ಕೆಳಗಿಳಿಸುವ ಬೇಡಿಕೆ ಬಗ್ಗೆ ಬಾಳಾ ಠಾಕ್ರೆ ಅವರೊಂದಿಗೆ ಅಡ್ವಾಣಿ ಚರ್ಚಿಸಿದ್ದರು' ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.
 
"ನಾವು (ಸಮಾವೇಶದ ನಂತರ) ಮಾತನಾಡುತ್ತ ಕುಳಿತಿದ್ದೆವು. ಅವರು (ಅಡ್ವಾಣಿ) ಬಾಳಾಸಾಹೇಬ್ ಅವರೊಂದಿಗೆ ಏನೋ ಒಂದು ವಿಷಯದ ಕುರಿತು ಚರ್ಚಿಸಬೇಕು ಎಂದು ಹೇಳಿದರು. ನಂತರ ನಾನು ಮತ್ತು ಪ್ರಮೋದ್ (ಮಹಾಜನ್) ಅಲ್ಲಿಂದ ಎದ್ದು ಹೊರಟೆವು. ಮೋದಿಯವರನ್ನು (ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕುವ ಬೇಡಿಕೆ) ಕುರಿತು ಮಾತನಾಡುತ್ತಾ ಅಡ್ವಾಣಿಯವರು ಬಾಳಾಸಾಹೇಬರ ಅಭಿಪ್ರಾಯ ಕೇಳಿದರು. ಮೋದಿಯನ್ನು ಮುಟ್ಟದಂತೆ ಬಾಳಾಸಾಹೇಬರು ಅಡ್ವಾಣಿಯವರಿಗೆ ಹೇಳಿದರು. ಮೋದಿಯನ್ನು ತೆಗೆದುಹಾಕಿದರೆ, (ಬಿಜೆಪಿ) ಗುಜರಾತ್ ಅನ್ನು ಕಳೆದುಕೊಳ್ಳಬೇಕಾಗುತ್ತದೆ ಮತ್ತು ಅದರಿಂದ ಹಿಂದುತ್ವಕ್ಕೂ ಹಾನಿಯಾಗುತ್ತದೆ' ಎಂದು ಅವರು ಹೇಳಿದ್ದರು ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments