Webdunia - Bharat's app for daily news and videos

Install App

ಸಾರ್ವಜನಿಕ ಮೊಹರಂ ಆಚರಣೆಗೆ ನಿರ್ಬಂಧ?

Webdunia
ಸೋಮವಾರ, 24 ಜುಲೈ 2023 (13:41 IST)
ರಾಯಚೂರು : ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತವು 19 ಗ್ರಾಮಗಳಲ್ಲಿ ಸಾರ್ವಜನಿಕ ಮತ್ತು ಗುಂಪಾಗಿ ಮೊಹರಂ ಆಚರಣೆಗೆ ನಿರ್ಬಂಧ ವಿಧಿಸಿದೆ.
 
ಕಳೆದ ಬಾರಿ ಈ 19 ಗ್ರಾಮಗಳಲ್ಲಿ ಮೊಹರಂ ಆಚರಣೆ ವೇಳೆ ಗಲಾಟೆ ನಡೆದಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಯಚೂರು ಜಿಲ್ಲಾಡಳಿತವು ಈ ನಿರ್ಧಾರ ಕೈಗೊಂಡಿದೆ.

ಜಿಲ್ಲಾಡಳಿತ ಸೂಚನೆಯಂತೆ, ಸಿಂಧನೂರು ತಾಲೂಕಿನ ಗಿಣಿವಾರ, ಕುನ್ನಟಗಿ, ಇಜೆ ಉದ್ಭಾಳ, ಉಪ್ಪಳ, ಎಲೆಕೂಡ್ಲಗಿ, ಇಜೆ ಬಸ್ಸಾಪುರ, ಆಯನೂರು, ತಿಪ್ಪನಹಟ್ಟಿ, ಮಾನ್ವಿ ತಾಲೂಕಿನ ಸಿರವಾರ ಪಟ್ಟಣ, ಕಡದಿನ್ನಿ, ಕವಿತಾಳ ಪಟ್ಟಣ, ಬಾಗಲವಾಡ, ಕಡದಿನ್ನಿ, ಬೊಮ್ಮನಾಳ, ಅಮೀನಗಡ, ಜಾಗೀನಪನ್ನೂರು, ನಂದಿಹಾಳ ಜಾನೇಕಲ್ ಗ್ರಾಮದಲ್ಲಿ, ಮಸ್ಕಿ ತಾಲೂಕಿನ ತಲೇಖಾನ ಗ್ರಾಮಗಳಲ್ಲಿ ಮೊಹರಂ ಆಚರಣೆಗೆ ನಿರ್ಬಂಧ ವಿಧಿಸಲಾಗಿದೆ.

ಈ ಬಾರಿ ನಿರ್ಬಂಧ ವಿಧಿಸಲಾದ ಗ್ರಾಮಗಳಲ್ಲಿ ಈ ಹಿಂದೆ ನಡೆದ ಮೊಹರಂ ಆಚರಣೆ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಮಾರಾಮಾರಿ ನಡೆದಿತ್ತು. ದೊಣ್ಣೆ, ಬಡಿಗೆಗಳನ್ನು ಹಿಡಿದುಕೊಂಡು ಬಡಿದಾಡಿಕೊಂಡಿದ್ದರು. ಇದರಿಂದ ಕಾಲ್ತುಲಿತವೂ ನಡೆದಿತ್ತು. ಇದೇ ಕಾರಣಕ್ಕೆ ಮೊಹರಂ ಆಚರಣೆಗೂ ಮುನ್ನ ಬಂದ ಗುಪ್ತ ಮಾಹಿತಿ ಆಧರಿಸಿ ದ್ವೇಷ, ಗಲಾಟೆ ನಿಗ್ರಹ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕ ಮೊಹರಂ ಆಚರಣೆಗೆ ನಿರ್ಬಂಧ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments