Webdunia - Bharat's app for daily news and videos

Install App

ಸಾರ್ವಜನಿಕ ಮೊಹರಂ ಆಚರಣೆಗೆ ನಿರ್ಬಂಧ?

Webdunia
ಸೋಮವಾರ, 24 ಜುಲೈ 2023 (13:41 IST)
ರಾಯಚೂರು : ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತವು 19 ಗ್ರಾಮಗಳಲ್ಲಿ ಸಾರ್ವಜನಿಕ ಮತ್ತು ಗುಂಪಾಗಿ ಮೊಹರಂ ಆಚರಣೆಗೆ ನಿರ್ಬಂಧ ವಿಧಿಸಿದೆ.
 
ಕಳೆದ ಬಾರಿ ಈ 19 ಗ್ರಾಮಗಳಲ್ಲಿ ಮೊಹರಂ ಆಚರಣೆ ವೇಳೆ ಗಲಾಟೆ ನಡೆದಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಯಚೂರು ಜಿಲ್ಲಾಡಳಿತವು ಈ ನಿರ್ಧಾರ ಕೈಗೊಂಡಿದೆ.

ಜಿಲ್ಲಾಡಳಿತ ಸೂಚನೆಯಂತೆ, ಸಿಂಧನೂರು ತಾಲೂಕಿನ ಗಿಣಿವಾರ, ಕುನ್ನಟಗಿ, ಇಜೆ ಉದ್ಭಾಳ, ಉಪ್ಪಳ, ಎಲೆಕೂಡ್ಲಗಿ, ಇಜೆ ಬಸ್ಸಾಪುರ, ಆಯನೂರು, ತಿಪ್ಪನಹಟ್ಟಿ, ಮಾನ್ವಿ ತಾಲೂಕಿನ ಸಿರವಾರ ಪಟ್ಟಣ, ಕಡದಿನ್ನಿ, ಕವಿತಾಳ ಪಟ್ಟಣ, ಬಾಗಲವಾಡ, ಕಡದಿನ್ನಿ, ಬೊಮ್ಮನಾಳ, ಅಮೀನಗಡ, ಜಾಗೀನಪನ್ನೂರು, ನಂದಿಹಾಳ ಜಾನೇಕಲ್ ಗ್ರಾಮದಲ್ಲಿ, ಮಸ್ಕಿ ತಾಲೂಕಿನ ತಲೇಖಾನ ಗ್ರಾಮಗಳಲ್ಲಿ ಮೊಹರಂ ಆಚರಣೆಗೆ ನಿರ್ಬಂಧ ವಿಧಿಸಲಾಗಿದೆ.

ಈ ಬಾರಿ ನಿರ್ಬಂಧ ವಿಧಿಸಲಾದ ಗ್ರಾಮಗಳಲ್ಲಿ ಈ ಹಿಂದೆ ನಡೆದ ಮೊಹರಂ ಆಚರಣೆ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಮಾರಾಮಾರಿ ನಡೆದಿತ್ತು. ದೊಣ್ಣೆ, ಬಡಿಗೆಗಳನ್ನು ಹಿಡಿದುಕೊಂಡು ಬಡಿದಾಡಿಕೊಂಡಿದ್ದರು. ಇದರಿಂದ ಕಾಲ್ತುಲಿತವೂ ನಡೆದಿತ್ತು. ಇದೇ ಕಾರಣಕ್ಕೆ ಮೊಹರಂ ಆಚರಣೆಗೂ ಮುನ್ನ ಬಂದ ಗುಪ್ತ ಮಾಹಿತಿ ಆಧರಿಸಿ ದ್ವೇಷ, ಗಲಾಟೆ ನಿಗ್ರಹ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕ ಮೊಹರಂ ಆಚರಣೆಗೆ ನಿರ್ಬಂಧ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments