ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ನಿರ್ಬಂಧ..!

geetha
ಬುಧವಾರ, 10 ಜನವರಿ 2024 (16:34 IST)
ಕೇರಳ : ಶಬರಿಮಲೆಯಲ್ಲಿ ಸಧ್ಯಕ್ಕೆ ಭೇಟಿ ನೀಡಿರುವ ಭಕ್ತಾದಿಗಳು ಹಿಂದಿರುಗುವವರೆಗೂ ಪ್ರವೇಶಾವಕಾಶಕ್ಕೆ ನಿರ್ಬಂಧ ಮುಂದುವರೆಯಲಿದೆ.  ಶಬರಿಮಲೆಯಲ್ಲಿ ಸ್ವಾಮಿ ಅಯ್ಯಪ್ಪನ ದೇಗುಲಕ್ಕೆ ಭಕ್ತಾದಿಗಳು ಪ್ರವಾಹೋಪಾದಿಯಲ್ಲಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಧ್ಯಕ್ಕೆ ಪ್ರವೇಶಾವಕಾಶಕ್ಕೆ ನಿರ್ಬಂಧ ವಿಧಿಸಲಾಗಿದೆ.
 
ಇದೇ ವೇಳೆ, ಜನರ ನೂಕುನುಗ್ಗಲನ್ನು ನಿಯಂತ್ರಿಸಲು ಪೊಲೀಸರು ಅಯ್ಯಪ್ಪ ಮಾಲಾಧಾರಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನುವ ಆರೋಪವನ್ನು ಕೇರಳ ಸರ್ಕಾರ ನಿರಾಕರಿಸಿದೆ. ಕೇರಳ ಹೈಕೋರ್ಟ್‌ ಗೆ ಸರ್ಕಾರ ಸಲ್ಲಿಸಿರುವ ಲಿಖಿತ ವರದಿಯಲ್ಲಿ ನಮ್ಮ ಸಿಸಿಟಿವಿ ಕೆಮೆರಾಗಳೂ ಸಹ ಭಕ್ತರ ಮೇಲೆ ನಡೆಸಿರುವ ಲಾಠಿ ಪ್ರಹಾರದ ಸಾಕ್ಷ್ಯಾಧಾರಗಳನ್ನು ಒದಗಿಸಲು ವಿಫಲವಾಗಿದೆ ಎಂದು ಹೇಳಿದೆ. 
 
ಈ ಹಿಂದೆ ಶಬರಿಮಲೆಗೆ ತೆರಳಿದ್ದ ಭಕ್ತಾದಿಗಳು ಸತತ 48 ತಾಸುಗಳ ಕಾಲ ಸರದಿ ಸಾಲಿನಲ್ಲಿ ನಿಂತು ಸುಸ್ತಾಗಿದ್ದು ಭಾರೀ ಸುದ್ದಿಯಾಗಿತ್ತು. ಸಾವಿರಾರು ಮಂದಿ ಆಹಾರ, ವಿಶ್ರಾಂತಿಯಿದಲ್ಲದೇ ಬಸವಳಿದು ಕೇರಳ ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದರು. ಈ ಕುರಿತು ದೂರು ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕೇರಳ ಹೈಕೋರ್ಟ್‌ ಭಕ್ತಾದಿಗಳಿಗೆ ಕುಡಿಯುವ ನೀರು, ಲಘು ಉಪಹಾರ ಮತ್ತು ಸರದಿಯಲ್ಲಿ ವಿಶ್ರಾಂತಿ ಕೇಂದ್ರಗಳ ವ್ಯವಸ್ಥೆ ಕಲ್ಪಿಸುವಂತೆ ದೇವಸ್ವಂ ಬೋರ್ಡ್‌ ಮತ್ತು ಕೇರಳ ಸರ್ಕಾರಕ್ಕೆ ತಾಕೀತು ಮಾಡಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments