Select Your Language

Notifications

webdunia
webdunia
webdunia
webdunia

ಶಿಕ್ಷಣ ಸಂಸ್ಥೆಗಳ ಬಳಿ ಗಾಂಜಾ ಮಾರಾಟಕ್ಕೆ ಬ್ರೇಕ್

ಸಿದ್ದರಾಮಯ್ಯ

geetha

bangalore , ಶುಕ್ರವಾರ, 9 ಫೆಬ್ರವರಿ 2024 (20:22 IST)
ಬೆಂಗಳೂರು-ಮಾದಕ ವ್ಯಸನಗಳಿಗೆ ಹೆಚ್ಚಿನ ಸಂಖ್ಯೆಯ ಮಕ್ಕಳು ಬಲಿಯಾಗುತ್ತಿರುವ ಬಗ್ಗೆ ಗಮನ ಸೆಳೆದಿದ್ದ ಶಾಸಕ ದಿನೇಶ್‌ ಗೂಳಿಗೌಡ ಅವರು, ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಆತಂಕಕಾರಿ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದು ಎಚ್ಚರಿಸಿದ್ದರು.ಗಾಂಜಾ ಮತ್ತು ಮಾದಕವಸ್ತುಗಳ ಹಾವಳಿ ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ವಿಶೇಷ ದಳ ರಚನೆ ಸೇರಿ ಹಲವು ಕ್ರಮ ಕೈಗೊಳ್ಳಲು ಪತ್ರದಲ್ಲಿ ಮನವಿ ಮಾಡಿದ್ದರು.ಈ ಸಂಬಂಧ ಶಾಸಕ ದಿನೇಶ್‌ ಗೂಳಿಗೌಡ ಬರೆದಿದ್ದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ ನೀಡಿ, ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಮತ್ತು ಮಾದಕ ಪದಾರ್ಥಗಳ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೇಮಿಗಳ ದಿನ ಮದ್ಯಪಾನ ನಿಷೇಧಕ್ಕೆ ಕಿಡಿ