Webdunia - Bharat's app for daily news and videos

Install App

'ಬನಾಯೇಂಗೆ ಮಂದಿರ್' ಹಾಡು ನಿಷೇಧ

Webdunia
ಶನಿವಾರ, 10 ಡಿಸೆಂಬರ್ 2016 (10:24 IST)
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಡಿ.11 ಮತ್ತು 12 ರಂದು ನಡೆಯಲಿರುವ ಹನುಮಮಾಲಾ ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಪಾಲನೆಯ ಸಲುವಾಗಿ ‘ಬನಾಯೇಂಗೆ ಮಂದಿರ್’ ಎಂಬ ಹಾಡನ್ನು ಸಾರ್ವಜನಿಕವಾಗಿ ಹಾಡದಂತೆ ಮತ್ತು ಆಡಿಯೋ ಅಥವಾ ವಿಡಿಯೋ ರೂಪದಲ್ಲಿ ಬಿತ್ತರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ. 
 
ಭಜರಂಗದಳದ ತಾಲೂಕು ಸಂಯೋಜಕರು ಹನುಮಮಾಲಾ ಕಾರ್ಯಕ್ರಮ ಹಮ್ಮಿಕೊಂಡಿದ್ದು,  16 ಜಿಲ್ಲೆಗಳ ಸುಮಾರು 4 ರಿಂದ 5 ಸಾವಿರ ಜನ ಭಕ್ತಾಧಿಗಳು ಸೇರಿ ಗಂಗಾವತಿ ನಗರದಲ್ಲಿ ಬಹಿರಂಗ ಸಭೆ ಮಾಡಿ ಕಾಲ್ನಡಿಗೆಯ ಮುಖಾಂತರ ಅಂಜನಾದ್ರಿ (ಕಿಷ್ಕಿಂದಾ) ಬೆಟ್ಟಕ್ಕೆ ತೆರಳಲಿದ್ದಾರೆ. 
 
ಹನುಮಮಾಲಾ ಕಾರ್ಯಕ್ರಮ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿಪಾಲನೆ, ಸಾರ್ವಜನಿಕ ಹಿತಾಸಕ್ತಿ ಹಾಗೂ ಕೋಮು ಸೌಹಾರ್ದತೆಯನ್ನು ಕಾಪಾಡುವ ದೃಷ್ಠಿಯಿಂದ ಗಂಗಾವತಿ ನಗರದಲ್ಲಿ ಡಿ.11 ರಂದು ಬೆಳಿಗ್ಗೆ 6 ಗಂಟೆಯಿಂದ ಡಿ.13 ರ ರಾತ್ರಿ 12 ಗಂಟೆಯವರೆಗೆ ‘ಬನಾಯೇಂಗೆ ಮಂದಿರ್’ ಎಂಬ ಹಾಡನ್ನು ಸಾರ್ವಜನಿಕವಾಗಿ ಹಾಡದಂತೆ ಮತ್ತು ಆಡಿಯೋ, ವೀಡಿಯೋ ರೂಪದಲ್ಲಿ ಬಿತ್ತರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments