Webdunia - Bharat's app for daily news and videos

Install App

ಬಂದ್ ಪರಿಣಾಮ: ಖಾಸಗಿ ವಾಹನಗಳಿಗೆ ಹಬ್ಬ

Webdunia
ಬುಧವಾರ, 9 ಜನವರಿ 2019 (16:06 IST)
ಭಾರತ ಬಂದ್ ಎರಡನೇ ದಿನದ ಮುಷ್ಕರದಿಂದ ವಿಶೇಷವಾಗಿ ಪ್ರಯಾಣಿಕರು ಪರದಾಡುವಂತಾಯಿತು. ಬಂದ್ ಮಾಡಿರುವುದನ್ನೇ ನೆಪ ಮಾಡಿಕೊಂಡಿರುವ ಖಾಸಗಿ ವಾಹನಗಳು ಜನರಿಂದ ಹೆಚ್ಚು ಹಣ ವಸೂಲಿ ದಂಧೆಗೆ ಇಳಿದಿದ್ದಾರೆ.

ಬಂದ್ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.   ಬೇರೆ ಊರುಗಳಿಗೆ ಪ್ರಯಾಣ ಮಾಡಲು ಸಾಧ್ಯವಾಗದ ಪರಿಸ್ಥಿತಿಯಿಂದ ಜನ ಕಕ್ಕಾಬಿಕ್ಕಿಯಾದರು. ಬಿಕೋ ಎನ್ನುವ ಬಸ್ ನಿಲ್ದಾಣದ ಮುಂದೆ ಇಂದು ಸಹ ಕಾದು ಕುಳಿತ ಜನ ಇನ್ನೂ ಸಂಚಾರ ಆರಂಭಗೊಳ್ಳದಿರುವ ಬಗ್ಗೆ ಸುದ್ದಿ ತಿಳಿದು ಖಾಸಗಿ ವಾಹನಗಳ ಪ್ರಯಾಣಕ್ಕೆ ಮುಂದಾದರು.

ಎರಡು ದಿನ ಸಾರಿಗೆ ಸಂಚಾರ ಸ್ಥಗಿತ, ಜೀಪ್ ಮತ್ತಿತರ ಖಾಸಗಿ ವಾಹನ ಚಾಲಕರು ಸಂಕ್ರಾಂತಿಯ ಪೂರ್ವದಲ್ಲಿಯೇ ಸುಗ್ಗಿ ಮಾಡಿದರು. ಸಾಮಾನ್ಯ ಪ್ರಯಾಣ ದರಕ್ಕಿಂತ ಎರಡು, ಮೂರು ಪಟ್ಟು ದರದಲ್ಲಿ ಖಾಸಗಿ ವಾಹನಗಳಲ್ಲಿ ಪ್ರಯಾಣಿಕರು ತಮ್ಮ ಊರು ಮುಟ್ಟಲು ಕಸರತ್ತು ನಡೆಸಿದರು. ಬಸ್ ನಿಲ್ದಾಣ ಮುಂದೆ ನಿನ್ನೆಯಿಂದ ಖಾಸಗಿ ವಾಹನಗಳದ್ದೇ ಕಾರುಬಾರು ತೀವ್ರವಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments