Webdunia - Bharat's app for daily news and videos

Install App

ಪ್ರತ್ಯೇಕ ತಾಲೂಕಿಗೆ ಒತ್ತಾಯಿಸಿದ ಬಂದ್ ಯಶಸ್ವಿ!

Webdunia
ಸೋಮವಾರ, 11 ಫೆಬ್ರವರಿ 2019 (18:35 IST)
ಪ್ರತ್ಯೇಕ ಕಾವೇರಿ ತಾಲ್ಲೂಕಿಗೆ ಒತ್ತಾಯಿಸಿ ನಡೆಸಲಾದ ಕುಶಾಲನಗರ ಬಂದ್  ಯಶಸ್ವಿಯಾಗಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದಲ್ಲಿ ಬಂದ್ ಗೆ ಕರೆ ನೀಡಲಾಗಿತ್ತು. ಕುಶಾಲನಗರ ವ್ಯಾಪ್ತಿಯನ್ನು ಕಾವೇರಿ ತಾಲೂಕಾಗಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಮುಂದುವರಿಸಿರುವ ಹೋರಾಟ ಸಮಿತಿ ಸದಸ್ಯರು ಬೇಡಿಕೆ ಈಡೇರಿಕೆಗೆ ಸರಕಾರವನ್ನು ಒತ್ತಾಯ ಮಾಡಿದರು.  

ಕಾವೇರಿ ತಾಲ್ಲೂಕಿಗಾಗಿ ಕಳೆದ ಐದು ವರ್ಷಗಳಿಂದ ನಿರಂತರ ಹೋರಾಟ  ನಡೆಸುತ್ತಿರುವ  ಸಮಿತಿ ಸದಸ್ಯರು, ಈ ಬಾರಿಯ ಬಜೆಟ್ ನಲ್ಲಿಯೂ ಕಾವೇರಿ ತಾಲ್ಲೂಕನ್ನು ಕೈಬಿಟ್ಟಿರುವುದನ್ನು ಖಂಡಿಸಿದರು. ಬೆಳಿಗ್ಗೆನಿಂದಲೇ ನಗರದ ವಿವಿಧ ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಬಂದ್ ಆಗಿದ್ದವು.

ಕುಶಾಲನಗರದ ಕಾರ್ಯಪ್ರವೃತ್ತದಲ್ಲಿ ವಿ. ಪಿ. ಶಶಿಧರ್ ನೇತೃತ್ವದಲ್ಲಿ ವಿವಿಧ  ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments