Webdunia - Bharat's app for daily news and videos

Install App

ಅಧಿಕಾರಕ್ಕೆ ಬಂದ್ರೆ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ: ಕುಮಾರಸ್ವಾಮಿ

Webdunia
ಮಂಗಳವಾರ, 31 ಜನವರಿ 2023 (11:19 IST)
ಕೊಪ್ಪಳ : ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸಂಪೂರ್ಣ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸಂಘಗಳ 1 ಲಕ್ಷ ರೂ. ವರೆಗಿನ ಸಾಲ ಮನ್ನಾ ಮಾಡುವೆ. ನಮಗೆ ಪೂರ್ಣ ಬಹುಮತ ಕೊಡಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಕೊಪ್ಪಳದ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾವಿರಾರು ರೈತರು, ಮಹಿಳೆಯರು ತಮ್ಮ ಕಷ್ಟ ಹೇಳಿಕೊಂಡು ನಮ್ಮ ಬಳಿ ಬರುತ್ತಿದ್ದಾರೆ.

ಯುವಕರು ಕೆಲಸ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ಜನರು ಮನೆ ಇಲ್ಲ ಎಂದು ನೋವು ಹೇಳಿಕೊಳ್ಳುತ್ತಿದ್ದಾರೆ. ಕೋವಿಡ್ ವೇಳೆ ಮೃತಪಟ್ಟವರ ಕುಟುಂಬಕ್ಕೆ ಇನ್ನೂ ಪರಿಹಾರ ಬಂದಿಲ್ಲ ಎನ್ನುತ್ತಾರೆ. ಅವರ ಕಷ್ಟಕ್ಕೆ ನಾನು ಸ್ಪಂದಿಸುತ್ತಿದ್ದೇನೆ ಎಂದು ತಿಳಿಸಿದರು.

ನನ್ನ ಸರ್ಕಾರ ಅಧಿಕಾರಕ್ಕೆ ಬಂದರೆ ಬಿತ್ತನೆ ಬೀಜಕ್ಕೆ, ಗೊಬ್ಬರ ಖರೀದಿಗೆ ಎಕರೆಗೆ 10 ಸಾವಿರ ರೂ. ಹಾಗೂ 10 ಎಕರೆ ಇದ್ದರೆ 1 ಲಕ್ಷ ರೂ. ರೈತರ ಖಾತೆಗೆ ಹಾಕಿವೆ. 24 ಗಂಟೆ ರೈತರ ಪಂಪ್ಸೆಟ್ಗೆ ವಿದ್ಯುತ್ ಪೂರೈಕೆ ಮಾಡುವೆ. ಯುವಕರಿಗೆ ತರಬೇತಿ, ಹಣಕಾಸಿನ ನೆರವು ಕಲ್ಪಿಸುವೆ ಎಂದು ಭರವಸೆ ನೀಡಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments