ಅಧಿಕಾರಕ್ಕೆ ಬಂದ್ರೆ ತಾನೇ ಜಿಲ್ಲೆಯ ಹೆಸರು ಬದಲಾವಣೆ: ಎಚ್‌ಡಿಕೆಗೆ ಡಿಕೆಶಿ ಟಾಂಗ್

Sampriya
ಶನಿವಾರ, 27 ಜುಲೈ 2024 (16:42 IST)
ಬೆಂಗಳೂರು : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡಿರುವುದನ್ನು ಮತ್ತೇ ರಾಮನಗರ ಜಿಲ್ಲೆ ಎಂದು ಬದಲಾವಣೆ ಮಾಡಲು ಕುಮಾರಸ್ವಾಮಿ ಹಣೆಯಲ್ಲೂ ಬರೆದಿಲ್ಲ ಎಂದು ಡಿಕೆಶಿ ಕೌಂಟರ್ ಕೊಟ್ಟಿದ್ದಾರೆ.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಿದ್ದಕ್ಕೆ ಆಕ್ರೋಶ ಹೊರಹಾಕಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಹೆಸರು ಬದಲಾವಣೆ ಮಾಡಿದವರು ಸರ್ವನಾಶ ಆಗುತ್ತಾರೆ ಎಂದಿದ್ದರು.

ಈ ಸಂಬಂಧ ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, 2028 ಕ್ಕೆ ರಾಮನಗರ ಹೆಸರು ಬದಲಾವಣೆ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಸವಾಲ್ ಹಾಕಿದ ಡಿಕೆ ಶಿವಕುಮಾರ್ 2028ಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರು ಬದಲಾವಣೆ ಮಾಡುವುದು ಕುಮಾರಸ್ವಾಮಿ ಹಣೆಯಲ್ಲೂ ಬರೆದಿಲ್ಲ. 2028ರಲ್ಲೂ ನಮ್ಮದೇ ಸರ್ಕಾರ ಮತ್ತೇ ಅಧಿಕಾರಕ್ಕೆ ಬರಲಿದೆ ಎಂದು ಸವಾಲು ಹಾಕಿದರು.

ಕುಮಾರಸ್ವಾಮಿ ಅವರು ಯಾವಾಗಲೂ ಸರ್ವನಾಶದ ರಾಜಕಾರಣ ಮಾಡಿಕೊಂಡು ಬಂದಿದ್ದು, ನಾವು ಒಳ್ಳೆಯದನ್ನು ಮಾಡಿದರೂ ಅವರು ಸರ್ವನಾಶ ಮಾಡುವುದನ್ನು ಬಯಸಿಕೊಂಡು ಬಂದಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments