Webdunia - Bharat's app for daily news and videos

Install App

ಮೊಬೈಲ್ ಕೊಡಲಿಲ್ಲವೆಂದು ನೇಣಿಗೆ ಶರಣಾದ ಬಾಲಕ, ನೋಡುತ್ತಾ ನಿಂತಿದ್ದ ತಂಗಿ

Krishnaveni K
ಬುಧವಾರ, 29 ಜನವರಿ 2025 (10:45 IST)
ಬೆಂಗಳೂರು: ಮೊಬೈಲ್ ಕೊಡಲಿಲ್ಲವೆಂದು ಬೆಂಗಳೂರಿನಲ್ಲಿ ಬಾಲಕನೊಬ್ಬ ನೇಣಿಗೆ ಶರಣಾಗಿದ್ದು, ಆತನ ತಂಗಿ ಏನೂ ಅರಿಯದೇ ನೋಡುತ್ತಾ ನಿಂತಿದ್ದಳು.

ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಮೊಬೈಲ್ ಚಟಕ್ಕೆ ಬಿದ್ದಿದ್ದ 13 ವರ್ಷ ಬಾಲಕ ಧ್ರುವ ಆತ್ಮಹತ್ಯೆ ಮಾಡಿಕೊಂಡವನು. ಪೋಷಕರು ಕೆಲಸಕ್ಕೆಂದು ಹೋಗಿದ್ದಾಗ ಅಣ್ಣ ಮತ್ತು ತಂಗಿ ಮಾತ್ರ ಮನೆಯಲ್ಲಿದ್ದರು. ಈ ವೇಳೆ ತನ್ನ ಉಡದಾರವನ್ನೇ ಬಿಚ್ಚಿ ಫ್ಯಾನ್ ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆದರೆ ದೇಹದ ಭಾರ ತಡೆದುಕೊಳ್ಳಲಾಗದೇ ಉಡದಾರ ಕಡಿದುಬಿದ್ದಿದೆ. ಜೊತೆಗೆ ಬಾಲಕನೂ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವೂ ಇಲ್ಲದೇ ತಂಗಿ ನೋಡುತ್ತಾ ನಿಂತಿದ್ದಳು. ಬಾಲಕ ಬಿದ್ದ ವೇಳೆಯೇ ತಾಯಿ ಕೆಲಸ ಮುಗಿಸಿ ಬಂದಿದ್ದಾರೆ.

ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲಿ ಆತನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಬಾಲಕನ ತಂದೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದರೆ ತಾಯಿ ಗಾರ್ಮೆಂಟ್ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ಅತಿಯಾದ ಮೊಬೈಲ್ ಬಳಕೆಯೇ ಬಾಲಕ ಈ ಕೃತ್ಯಕ್ಕೆ ಮುಂದಾಗಿರುವುದಕ್ಕೆ ಕಾರಣ ಎಂದು ಕಂಡುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments