Webdunia - Bharat's app for daily news and videos

Install App

ಬೆಂಗಳೂರಿನಿಂದ ಈ ದಿನಗಳಲ್ಲಿ ವಿಮಾನವಿರಲ್ಲ: ಇಲ್ಲಿದೆ ಡೀಟೈಲ್ಸ್

Krishnaveni K
ಮಂಗಳವಾರ, 28 ಜನವರಿ 2025 (14:28 IST)
ಬೆಂಗಳೂರು: ಈ ದಿನಗಳಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಈ ಒಂದು ಸಮಯದಲ್ಲಿ ವಿಮಾನಗಳ ಹಾರಾಟ ಸ್ಥಗಿತಗೊಳ್ಳಲಿದೆ. ಯಾವಾಗ ಇಲ್ಲಿದೆ ಸಂಪೂರ್ಣ ಮಾಹಿತಿ.

ಫೆಬ್ರವರಿ 10 ರಿಂದ 14 ರವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ 2025 ಆಯೋಜನೆಯಾಗಲಿದೆ. ಈ ವೇಳೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ಕೆಲವೊಂದು ಬದಲಾವಣೆಗಳಾಗಲಿವೆ. ಏರ್ ಶೋ ಸಂದರ್ಭದಲ್ಲಿ  ವಿಮಾನಗಳ ಹಾರಾಟ ಸ್ಥಗಿತಗೊಳ್ಳಲಿದೆ.

ಎಲ್ಲಾ ಸಮಯದಲ್ಲೂ ಅಲ್ಲ. ಈ ನಾಲ್ಕು ದಿನಗಳ ಕಾಲ ಏರ್ ಶೋ ನಡೆಯುವ ನಿಗದಿತ ಸಮಯದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ವಿಮಾನಗಳ ಹಾರಾಟ ಕೆಲವು ಸಮಯ ಸ್ಥಗಿತವಾಗುವುದು. ವಾಯುಪಡೆ ವಿಮಾನಗಳ ಹಾರಾಟಕ್ಕೆ ಅಡ್ಡಿಯಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ.

ಫೆಬ್ರವರಿ 5 ರಿಂದ 8 ರವರೆಗೆ ಬೆಳಿಗ್ಗೆ 9 ಗಂಟೆಯಿಂದ 12 ಗಂಟೆಯವರೆಗೆ ಮತ್ತು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿಮಾನಗಳ ಹಾರಾಟ ಸಮಯದಲ್ಲಿ ಕೆಲವೊಂದು ಬದಲಾವಣೆಗಳಾಗಲಿವೆ. ಫೆಬ್ರವರಿ 9 ರಂದು ಬೆಳಿಗ್ಗೆ9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಂಪೂರ್ಣವಾಗಿ ವಿಮಾನ ಹಾರಾಟ ಬಂದ್ ಆಗಲಿದೆ.

ಫೆಬ್ರವರಿ 10 ರಂದು ಅಂದರೆ ಏರ್ ಶೋ ಆರಂಭದ ದಿನ ಬೆಳಿಗ್ಗೆ 9 ರಿಂದ 12 ಮತ್ತು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ವಿಮಾನಗಳ ಹಾರಾಟವಿರುವುದಿಲ್ಲ. ಫೆಬ್ರವರಿ 11, 12 ರಂದು 12 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ವಿಮಾನ ಹಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಫೆಬ್ರವರಿ 13 ಮತ್ತು 14 ರಂದು ಬೆಳಿಗ್ಗೆ 9 ರಿಂದ 12 ಮತ್ತು ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ ವಿಮಾನಗಳ ಹಾರಾಟಕ್ಕೆ ನಿರ್ಬಂಧವಿರಲಿದೆ. ಈ ವಿಮಾನಗಳ ವೇಳಾಪಟ್ಟಿ ಬದಲಾವಣೆ ಗಮನಿಸಿಕೊಂಡು ವಿಮಾನ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡಿಕೊಳ್ಳುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಮುಂದಿನ ಸುದ್ದಿ
Show comments