ಆಂಬ್ಯುಲೆನ್ಸ್ ಗೆ ದಾರಿ ಬಿಡದೇ ದರ್ಪ ತೋರಿದ ಆಟೋ ಚಾಲಕ: ವಿಡಿಯೋ

Krishnaveni K
ಶನಿವಾರ, 25 ಜನವರಿ 2025 (11:39 IST)
Photo Credit: X
ಬೆಂಗಳೂರು: ಆಂಬ್ಯುಲೆನ್ಸ್ ಬರುತ್ತಿದ್ದರೂ ದಾರಿ ಬಿಡದೇ ದರ್ಪ ತೋರಿದ ಆಟೋ ಚಾಲಕನಿಗೆ ಬೆಂಗಳೂರು ಸಂಚಾರ ಪೊಲೀಸರು ಬಂಧಿಸಿ ದಂಡ ವಿಧಿಸಿದ್ದಾರೆ.

ಆಂಬ್ಯುಲೆನ್ಸ್ ಬರುತ್ತಿದ್ದರೆ ಯಾವುದೇ ಟ್ರಾಫಿಕ್ ನಲ್ಲಿದ್ದರೂ ದಾರಿ ಬಿಡಬೇಕು ಎಂದು ನಿಯಮವೇ ಇದೆ. ತುರ್ತಾಗಿ ಒಬ್ಬರ ಜೀವ ಉಳಿಸುವ ಕಾರಣಕ್ಕೆ ತೆರಳುವ ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಡುವುದು ಮಾನವೀಯತೆಯ ದೃಷ್ಟಿಯಿಂದಲೂ ನಮ್ಮ ಕರ್ತವ್ಯವಾಗಿದೆ.

ಆದರೆ ಈ ಆಟೋ ಚಾಲಕ ಹಾರ್ನ್ ಸಾಲದೆಂಬಂತೆ ದಾರಿ ಬಿಡುವಂತೆ ಆಂಬ್ಯುಲೆನ್ಸ್ ಚಾಲಕ ವಾಯ್ಸ್ ಸಂದೇಶ ಮಾಡಿದರೂ ಕೇಳದೇ ದರ್ಪ ತೋರಿದ್ದಾನೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಬೆಳಂದೂರು ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಕೂಡ್ಲು ನಿವಾಸಿ ಪರಮೇಶ್ ಎನ್ನುವ 49 ವರ್ಷದ ವ್ಯಕ್ತಿ ಬಂಧಿತ. ಈತನನ್ನ ಬಂಧಿಸಿ ದಂಡ ವಿಧಿಸಿ ಬಿಡುಗಡೆ ಮಾಡಲಾಗಿದೆ. ಆಟೋ ನೋಂದಣಿ ಸಂಖ್ಯೆ ಆಧರಿಸಿ ಆತನನ್ನು ವಶಕ್ಕೆ ಪಡೆಯಲಾಗಿತ್ತು. ವಿಚಾರಣೆ ವೇಳೆ ನನಗೆ ಹಿಂದಿನಿಂದ ಆಂಬ್ಯುಲೆನ್ಸ್ ಬರುತ್ತಿದ್ದುದು ಗೊತ್ತಾಗಿರಲಿಲ್ಲ ಎಂದು ಸಮಜಾಯಿಷಿ ನೀಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ನೋದಣಿಯಾಗದಿರುವ ಆರ್‌ಎಸ್‌ಎಸ್‌ ಭೂಗತ ಸಂಘಟನೆಯಲ್ಲವೇ: ಬಿಕೆ ಹರಿಪ್ರಸಾದ್‌

ಮುಂದಿನ ಸುದ್ದಿ
Show comments