Select Your Language

Notifications

webdunia
webdunia
webdunia
webdunia

ಬೆಂಗಳೂರು ಕ್ರೈಂ ಸಿಟಿಯಾಗಿದೆ: ಜಗದೀಶ್ ಶೆಟ್ಟರ್ ಕಿಡಿ

ಬೆಂಗಳೂರು ಕ್ರೈಂ ಸಿಟಿಯಾಗಿದೆ: ಜಗದೀಶ್ ಶೆಟ್ಟರ್ ಕಿಡಿ
ಬೆಂಗಳೂರು , ಗುರುವಾರ, 16 ಮಾರ್ಚ್ 2017 (14:41 IST)
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದುಷ್ಕರ್ಮಿಗಳಿಗೆ ಕಾನೂನು ಭಯ ಇಲ್ಲದಂತಾಗಿದೆ. ಇದೊಂದು ಕ್ರೈಂ ಸಿಟಿಯಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ. 
 
ಬಿಜೆಪಿ ಮುಖಂಡರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆಯನ್ನು ತಡೆಯುವಲ್ಲಿ ವಿಫಲವಾಗಿರುವ ಗೃಹ ಸಚಿವ ಜಿ.ಪರಮೇಶ್ವರ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಹಲವಾರು ಬಿಜೆಪಿ ಮುಖಂಡರುಗಳ ಮೇಲೆ ಹಲ್ಲೆಯಾಗಿದೆ, ಕೊಲೆಗಳಾಗಿವೆ. ಆದಾಗ್ಯೂ ಕಾಂಗ್ರೆಸ್ ಸರಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ಮುಖಂಡರುಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ. ಹಲ್ಲೆಗಳನ್ನು ತಡೆಯದಂತೆ ಸರಕಾರ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ: ದೇವೇಗೌಡ ಸ್ಪಷ್ಟನೆ