Webdunia - Bharat's app for daily news and videos

Install App

ಬೆಂಗಳೂರು ಡಿ. ಸಿ. ಜಾಮೀನು ಅರ್ಜಿ ವಜಾ

Webdunia
ಮಂಗಳವಾರ, 19 ಜುಲೈ 2022 (18:59 IST)
ಭೂ ವ್ಯಾಜ್ಯವೊಂದರಲ್ಲಿ ತಮ್ಮ ಪರ ಆದೇಶ ನೀಡಲು 5 ಲಕ್ಷ ರೂ. ಲಂಚ ಸ್ವೀಕಾರ ಆರೋಪ ಪ್ರಕರಣದಲ್ಲಿ ಬೆಂಗಳೂರು ನಗರ ಜಿಲ್ಲೆಯ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
 
ಅವರ ಜಾಮೀನು ಅರ್ಜಿ ಇನ್ನೂ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬರಬೇಕಿದೆ.
ಮೂರು ದಿನಗಳಲ್ಲಿ ನ್ಯಾ. ಸಂದೇಶ್ ಅವರಿದ್ದ ಏಕಸದಸ್ಯಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದೆ.
 
ಇದೇ ಪ್ರಕರಣದ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪತಹಸೀಲ್ದಾರ್ ಪಿ.ಎಸ್. ಮಹೇಶ್ ಜಾಮೀನು ಅರ್ಜಿ ಗುರುವಾರ ವಿಚಾರಣೆಗೆ ಬರಲಿದ್ದು, ಅದರ ಜೊತೆ ಜೆ.ಮಂಜುನಾಥ್ ಜಾಮೀನು ಅರ್ಜಿಯನ್ನೂ ಸಹ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಗಳಿವೆ.
ಹೈಕೋರ್ಟ್ ಚಾಟಿ ನಂತರ ಬಂಧನ: ಲಂಚ ಆರೋಪ ಪ್ರಕರಣದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಮೇಲ್ನೋಟಕ್ಕೆ ಸ್ಪಷ್ಟ ಸಾಕ್ಷ್ಯವಿದ್ದರೂ ಕ್ರಮ ಕೈಗೊಳ್ಳದ ಭ್ರಷ್ಟಚಾರ ನಿಗ್ರಹ ದಳದ ಕಾರ್ಯವನ್ನು ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತ್ತು.
 
''ನೀವು(ಎಸಿಬಿ) ಸಣ್ಣ ಪುಟ್ಟ ಜನರನ್ನು ಹಿಡಿಯುತ್ತೀರಿ, ದೊಡ್ಡ ದೊಡ್ಡ ತಿಮಿಂಗಲಗಳನ್ನು ಹಾಗೆಯೇ ಬಿಡುತ್ತೀರಿ. ಇದು ಸರಿಯೇ, ಕಾನೂನು ಎಲ್ಲರಿಗೂ ಒಂದೇ, ಯಾವುದೇ ಅಧಿಕಾರಿಯ ಮುಲಾಜಿಗೆ ಒಳಗಾಗದೆ ಕಾರ್ಯನಿರ್ವಹಿಸಬೇಕು'' ಎಂದು ಎಸಿಬಿ ಮತ್ತು ಅದರ ಮುಖ್ಯಸ್ಥ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಹರಿಹಾಯ್ದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments