Webdunia - Bharat's app for daily news and videos

Install App

ಬೆಂಗಳೂರು ಅಭಿವೃದ್ಧಿ ಇಲಾಖೆ ಸಚಿವರ ಬದಲಾಯಿಸಿ; ಸಿಎಂಗೆ ಶಾಸಕ ಮುನಿರತ್ನ ಪತ್ರ

Sampriya
ಗುರುವಾರ, 13 ಫೆಬ್ರವರಿ 2025 (17:07 IST)
ಬೆಂಗಳೂರಿನ ಒಳಿತಿಗೆ ಯಾರನ್ನಾದರೂ ಉಸ್ತುವಾರಿ ಸಚಿವರನ್ನಾಗಿ ಮಾಡಿ ಎಂದು ಹೇಳುವ ಮೂಲಕ ಬೆಂಗಳೂರು ಅಭಿವೃದ್ಧಿ ಇಲಾಖೆ ಸಚಿವರ ಬದಲಾವಣೆಗೆ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಆಗ್ರಹಿಸಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ 16ನೇ ಬಜೆಟ್​ನಲ್ಲಿ ಬೆಂಗಳೂರು ನಗರಕ್ಕೆ ನೀಡುವ ಅನುದಾನ ಸಂಬಂಧ ಉಲ್ಲೇಖಿಸಿ, ಬೆಂಗಳೂರಿನ ಒಳಿತಿಗೆ ಯಾರನ್ನಾದರೂ ಉಸ್ತುವಾರಿ ಸಚಿವರನ್ನಾಗಿ ಮಾಡಿ ಎಂದು ಆಗ್ರಹಿಸಿದ್ದಾರೆ.

ಆಂಧ್ರ ಸಿಎಂ ಸಹಚರರು, ಗುತ್ತಿಗೆದಾರರು ನಮ್ಮ ರಾಜ್ಯದ ಗುತ್ತಿಗೆದಾರರ ಮೇಲೆ ಸವಾರಿ ಮಾಡಲು ಬಂದಿದ್ದಾರೆ. ಹೊರ ರಾಜ್ಯದ ಗುತ್ತಿಗೆದಾರರಿಗೆ ಶೇ 12ರಷ್ಟು ಮುಂಗಡ ಅನುದಾನ ನೀಡಿದ್ದಾರೆ. ಅನುದಾನ ಖರೀದಿ ಮಾಡಲು ಶೇ 12ರಷ್ಟು ಮುಂಗಡ ಹಣ ನೀಡಿದ್ದಾರೆ. ಕಾರ್ಯಾದೇಶ ಕೊಟ್ಟ ನಂತರ ಶೇ 8, ಅನುದಾನ ಬಿಡುಗಡೆ ಮಾಡಲು ಶೇ 15 ರಷ್ಟು ಸೇರಿ ಒಟ್ಟಾರೆ‌ ಶೇ 35 ಕ್ಕೆ ವ್ಯವಹಾರ ಕುದುರಿಸಿ ಮುಂಗಡ ಹಣ ನೀಡಿದ್ದಾರೆ.

ಈ ಸಂಬಂಧ ಈಗಾಗಲೇ ಫೈವ್ ಸ್ಟಾರ್‌ ಹೋಟೆಲ್‌ಗಳಲ್ಲಿ ವ್ಯವಹಾರ ಕುದುರಿಸಿದ್ದಾರೆ ಎಂದು ಬೆಂಗಳೂರು ಅಭಿವೃದ್ಧಿ ಇಲಾಖೆ ಸಚಿವರ ವಿರುದ್ಧ ಮುನಿರತ್ನ ಆರೋಪ ಮಾಡಿದ್ದಾರೆ.

ಬೆಂಗಳೂರು ನಗರದ ಉಸ್ತುವಾರಿ ಸಚಿವರಾಗಿ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್ ಅವರನ್ನು ಮರು ನೇಮಕ ಮಾಡಬಹುದು ಎಂದು ಮುನಿರತ್ನ ಸಿಎಂಗೆ ಸಲಹೆ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments