Webdunia - Bharat's app for daily news and videos

Install App

ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದ ಬೆಂಗಳೂರು ವೈದ್ಯನಿಗೆ ಮತ್ತೆ ಕೋವಿಡ್ ಸೋಂಕು..!

Webdunia
ಗುರುವಾರ, 9 ಡಿಸೆಂಬರ್ 2021 (19:45 IST)
ಬೆಂಗಳೂರು: ಓಮಿಕ್ರಾನ್ ಸೋಂಕು ಪೀಡಿತರಾಗಿದ್ದ ಬೆಂಗಳೂರು ವೈದ್ಯರಲ್ಲಿ ಮೊದಲ ಪರೀಕ್ಷೆಯ 15 ದಿನಗಳು ಕಳೆದರೂ ಕೋವಿಡ್-19 ಸೋಂಕು ಸಕ್ರಿಯವಾಗಿರುವುದು ಕಂಡುಬರುತ್ತಿದೆ.
ಅಚ್ಚರಿಯೆಂಬಂತೆ ವೈದ್ಯರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಓರ್ವ ವ್ಯಕ್ತಿ ಹಾಗೂ ದ್ವಿತೀಯ ಸಂಪರ್ಕದ ಇಬ್ಬರಲ್ಲಿ ಸೋಂಕು ಪತ್ತೆ ಪರೀಕ್ಷೆಯಲ್ಲಿ ಕೋವಿಡ್-19 ನೆಗೆಟೀವ್ ತೋರಿಸುತ್ತಿದೆ.
ಒಮಿಕ್ರಾನ್ ಸೋಂಕು ಪತ್ತೆಯಾಗಿ 15 ದಿನಗಳು ಕಳೆದಿದ್ದ ಹಿನ್ನೆಲೆಯಲ್ಲಿ 2 ನೇ ಬಾರಿಯ ಪರೀಕ್ಷೆಯಲ್ಲಿ ನೆಗೆಟೀವ್ ವರದಿಯನ್ನು ಅರಿವಳಿಕೆ ತಜ್ಞರಾಗಿರುವ ವೈದ್ಯರು ನಿರೀಕ್ಷಿಸುತ್ತಿದ್ದರು. ಆದರೆ 2ನೇ ಬಾರಿಯೂ ಕೋವಿಡ್-19 ಸೋಂಕು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಬೋರಿಂಗ್ ಆಸ್ಪತ್ರೆಯಲ್ಲೇ ಐಸೊಲೇಷನ್ ಹಾಗೂ ಚಿಕಿತ್ಸೆಯನ್ನು ಮುಂದುವರೆಸಬೇಕಾಗಿದೆ.
ವೈದ್ಯರಿಂದ ಸಂಗ್ರಹಿಸಲಾದ ಮಾದರಿಗಳನ್ನು ಮತ್ತೊಮ್ಮೆ ಪರೀಕ್ಷೆಗಾಗಿ 24 ಗಂಟೆಗಳ ನಂತರ ಕಳಿಸಲಾಗುತ್ತದೆ. ಸೋಮವಾರ ನೆಗೆಟೀವ್ ವರದಿ ಪಡೆದಿದ್ದವರನ್ನೂ ಮತ್ತೊಮ್ಮೆ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಹಿರಿಯ ವೈದ್ಯರೊಬ್ಬರು ಮಾಹಿತಿ ನೀಡಿದ್ದಾರೆ.
ವೈದ್ಯರು ಹಾಗೂ ಅವರ ಸಂಪರ್ಕಿತರು ನೆಗೆಟೀವ್ ವರದಿ ದೃಢಪಡುವವರೆಗೆ ಐಸೊಲೇಷನ್ ಹಾಗೂ ಚಿಕಿತ್ಸೆಯನ್ನು ಮುಂದುವರೆಸಬೇಕಾಗುತ್ತದೆ. ಓಮಿಕ್ರಾನ್ ಪೀಡಿತ ವೈದ್ಯರು ಹಾಗೂ ಅವರ ಸಹೋದ್ಯೋಗಿಗಳಿಗೆ ರಕ್ತದೊತ್ತಡ ಹಾಗೂ ಆಕ್ಸಿಜನ್ ಮಟ್ಟ ಹಾಗೂ ಇತರೆ ಪ್ರಮುಖ ಆರೋಗ್ಯ ಅಂಶಗಳು ಸಹಜವಾಗಿದೆ.
ವೈದ್ಯರಿಗೆ ಮಧುಮೇಹ ಇದ್ದು, ಇನ್ನೂ ಪಾಸಿಟೀವ್ ಬರುತ್ತಿರುವುದಕ್ಕೆ ಇದೂ ಒಂದು ಕಾರಣ ಇರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಡೆಲ್ಟಾ ಹಾಗೂ ಇನ್ನಿತರ ರೂಪಾಂತರಿ ಸೋಂಕು ಪ್ರಕರಣಗಳಲ್ಲಿಯೂ ಈ ರೀತಿ ಆಗಿರುವ ಉದಾಹರಣೆಗಳಿವೆ. ಹಲವರಿಗೆ ಚಿಕಿತ್ಸೆಯ 21 ದಿನಗಳ ನಂತರ ಪಾಸಿಟೀವ್ ಬಂದಿರುವ ಉದಾಹರಣೆಗಳೂ ಇವೆ ಎಂದು ವೈದ್ಯರೊಬ್ಬರು ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments