ಬೆಂಗಳೂರು ಸೇಫ್ ಸಿಟಿ

Webdunia
ಶುಕ್ರವಾರ, 7 ಜನವರಿ 2022 (16:34 IST)
ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ಮೂಲಕ ಉದ್ಯಾನನಗರಿ ಬೆಂಗಳೂರನ್ನು ಸೇಫ್ ಸಿಟಿಯನ್ನಾಗಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.
ಅಪರಾಧ ಪ್ರಕರಣಗಳು ಹಾಗೂ ಪತ್ತೆಯಾಗಿರುವ ಕಳವು ಪ್ರಕರಣಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಪರಾಧ ಪ್ರಕರಣಗಳ ನಿಯಂತ್ರಣದ ಬಗ್ಗೆ ವಿವರಣೆ ನೀಡಿದರು.
 
ಸರಗಳ್ಳತನ, ಡಕಾಯಿತಿ, ಕೊಲೆ, ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲಾಗಿದೆ. ಈ ಹಿಂದೆ ರೌಡಿಗಳು ಆಯಾ ಪ್ರದೇಶದ ಚೌಕಟ್ಟನ್ನು ವಿಧಿಸಿಕೊಂಡು ಪಾರುಪತ್ಯ ಸಾಧಿಸುತ್ತಿದ್ದರು. ಮಚ್ಚು , ಲಾಂಗ್ ಸೇರಿದಂತೆ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುತ್ತಿದ್ದ ಪ್ರಸಂಗಗಳು ವರದಿಯಾಗಿದ್ದವು. ಸರಗಳ್ಳತನ, ದರೋಡೆ ಪ್ರಕರಣಗಳು ಹೆಚ್ಚಿದ್ದವು.
 
ಪೊಲೀಸರು ಬಿಗಿ ಕ್ರಮ ಕೈಗೊಳ್ಳುವ ಮೂಲಕ ಎಲ್ಲದಕ್ಕೂ ಕಡಿವಾಣ ಹಾಕಲಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿಕೊಂಡರೆ ಅಪರಾಧದ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಹಾಗಾಗಿ ನಗರದ ಜನರಲ್ಲಿ ಸುರಕ್ಷತೆಯ ಭಾವನೆಯಿದೆ ಎಂದು ಆಯುಕ್ತರು ಹೇಳಿದರು. ರೌಡಿ ಚಟುವಟಿಕೆಗಳನ್ನು ನಡೆಸುತ್ತಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಕೆಲವರು ಜೈಲಿನಲ್ಲಿದ್ದುಕೊಂಡೇ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಅಂಥವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.
 
ಜೈಲಿನಲ್ಲಿದ್ದವರಿಗೆ ಸಹಾಯ ಮಾಡುತ್ತಿದ್ದ ಸಹಚರರ ಮೇಲೂ ನಿಗಾ ಇಟ್ಟು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಕಾನೂನು ಬಾಹಿರ ಚಟುವಟಿಕೆಗಳು ತಗ್ಗಿವೆ ಎಂದರು. 2020ರ ಜುಲೈ ನಂತರ ಮಾದಕ ವಸ್ತುಗಳ ವಿರುದ್ಧ ಸಮರವನ್ನೇ ಸಾರಲಾಗಿತ್ತು. ಹಲವಾರು ಮಂದಿ ಡ್ರಗ್ ಪೆಡ್ಲರ್‍ಗಳನ್ನು ಬಂಸಲಾಗಿದೆ. ಮಾದಕವಸ್ತು ಜಾಲದಲ್ಲಿದ್ದ ಸೆಲೆಬ್ರಿಟಿಗಳನ್ನು ಕೂಡ ಬಂಸಿದ್ದೇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ