Webdunia - Bharat's app for daily news and videos

Install App

ಬೆಂಗಳೂರು ಮಾಲ್ ಬೆಂಕಿ ಅವಘಡ

Webdunia
ಶನಿವಾರ, 15 ಜನವರಿ 2022 (15:21 IST)
ಸಿಲಿಕಾನ್ ಸಿಟಿಯಲ್ಲಿ ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸೌತ್ ಇಂಡಿಯಾ ಮಾಲ್‍ನಲ್ಲಿರುವ ರಿಲಯನ್ಸ್ ಮಳಿಗೆ ಹೊತ್ತಿ ಉರಿದಿದೆ. ಬನ್ನೇರುಘಟ್ಟ ರಸ್ತೆಯ ಅರಕೆರೆ ಸಿಗ್ನಿಲ್ ಬಳಿ ಈ ಮಳಿಗೆ ಇದ್ದು , ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಾಪಕವಾಗಿ ಹರಡಿದೆ.
ಸುದ್ದಿ ತಿಳಿದ ತಕ್ಷಣ ಅಗ್ನಿ ಶಾಮಕ ಸಿಬ್ಬಂದಿ 8 ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಸತತ ಏಳೆಂಟು ಗಂಟೆ ಪರಿಶ್ರಮದಿಂದ ಬೆಂಕಿ ನಂದಿಸಲು ಹರಸಾಹಸಪಟ್ಟು ಕೊನೆಗೂ 11 ಗಂಟೆ ಸುಮಾರಿಗೆ ಬೆಂಕಿ ತಹಬದಿಗೆ ಬಂದಿದ್ದು, ಹೆಚ್ಚಿನ ದುರಂತ ತಪ್ಪಿದಂತಾಗಿದೆ.
 
ಈ ಕಟ್ಟಡದ ನೆಲಮಾಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು , ಅಲ್ಲಿದ್ದ ವಸ್ತುಗಳು, ಬಟ್ಟೆಗಳು ಹೊತ್ತಿ ಉರಿದು ಮಾಳಿಗೆ ಪೂರ್ತಿ ಅವರಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸದ್ಯಕ್ಕೆ ಪರಿಸ್ಥಿತಿ ಹತೋಟಿಯಲ್ಲಿದ್ದು , ಬೆಂಕಿ ಅವಘಡಕ್ಕೆ ನಿಖರ ಕಾರಣ ಹಾಗೂ ಅಗ್ನಿ ದುರಂತದಿಂದ ಆದ ನಷ್ಟದ ಬಗ್ಗೆ ಸದ್ಯಕ್ಕೆ ತಿಳಿದುಬಂದಿಲ್ಲ.
 
ಸ್ಥಳಕ್ಕೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದು , ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕೆ ಭ್ರಷ್ಟಚಾರವನ್ನು ಪರಿಚಯಿಸಿದ್ದೆ ಕಾಂಗ್ರೆಸ್‌

ಭಾರೀ ಕುತೂಹಲ ಮೂಡಿಸಿದ ಮೈಸೂರಲ್ಲಿ ಸಚಿವ ಸ್ಥಾನ ವಂಚಿತರ ದಿಢೀರ್ ಸಭೆ

ಊಟಕ್ಕೆಂದು ಕರೆದುಕೊಂಡು ಹೋಗಿ ಮಕ್ಕಳಿಬ್ಬರ ಜೀವವನ್ನೇ ತೆಗೆದ ತಂದೆ, ಬೆಂಗಳೂರಿನ ಐಷರಾಮಿ ಹೊಟೇಲ್‌ನಲ್ಲಿ ಆಗಿದ್ದೇನು

ತಮಿಳುನಾಡಿಗೆ 12ಸಾವಿರ ಕ್ಯೂಸೆಕ್ ನೀರು ಬಿಡುವ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಜಾರ್ಖಂಡ್ ವಿದ್ಯಾರ್ಥಿಗಳ ಬಗ್ಗೆ ಕೇಳುತ್ತಿದ್ದಂತೇ ಎಲ್ಲವನ್ನೂ ಸಂಸತ್ ನಲ್ಲಿ ಚರ್ಚಿಸಕ್ಕಾಗಲ್ಲ ಎಂದು ಹೊರಟೇ ಹೋದ ಮಲ್ಲಿಕಾರ್ಜುನ ಖರ್ಗೆ Video

ಮುಂದಿನ ಸುದ್ದಿ
Show comments