Webdunia - Bharat's app for daily news and videos

Install App

ಗಣೇಶ ಚತುರ್ಥಿ ಇಫೆಕ್ಟ್: ಬೆಂಗಳೂರು ಮಾರುಕಟ್ಟೆ ಫುಲ್ ರಶ್, ಬೆಲೆ ಗಗನಕ್ಕೆ

Krishnaveni K
ಶನಿವಾರ, 7 ಸೆಪ್ಟಂಬರ್ 2024 (09:05 IST)
ಬೆಂಗಳೂರು: ಗಣೇಶ ಚತುರ್ಥಿ ನಿಮಿತ್ತ ನಿನ್ನೆ ಸಂಜೆಯಿಂದಲೇ ಬೆಂಗಳೂರಿನ ಮಾರುಕಟ್ಟೆಗಳ ಜನಜಂಗುಳಿ ಕಂಡುಬಂದಿದ್ದು, ತರಕಾರಿ, ಹೂ, ಹಣ್ಣಿನ ಬೆಲೆಯೂ ಗಗನಕ್ಕೇರಿದೆ.

ಗಣೇಶ ಪೂಜೆಗೆ ಬೇಕಾದ ಹೂ, ಹಣ್ಣು, ಬಾಳೆ ಕಂಬ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಈ ಕಾರಣಕ್ಕೆ ನಿನ್ನೆ ಸಂಜೆಯಿಂದಲೇ ಕುಟುಂಬ ಸಮೇತ ಜನ ಮಾರುಕಟ್ಟೆಗಳಿಗೆ ಲಗ್ಗೆಯಿಟ್ಟಿದ್ದಾರೆ. ಕೆಆರ್ ಮಾರುಕಟ್ಟೆ, ಶಿವಾಜಿನಗರ, ಜಯನಗರ ಮಾರುಕಟ್ಟೆ ಸೇರಿದಂತೆ ಬಹುತೇಕ ಕಡೆ ಜನ ಜಂಗುಳಿ ಕಂಡುಬಂದಿದೆ.

ಇನ್ನು, ಈ ವಾರಂತ್ಯಕ್ಕೆ ಸತತ ರಜೆಯಿರುವ ಕಾರಣಕ್ಕೆ ಸಾಕಷ್ಟು ಜನ ತಮ್ಮ ಊರುಗಳಿಗೆ ತೆರಳುತ್ತಿದ್ದು, ನಿನ್ನೆ ಸಂಜೆ ನಗರದಲ್ಲಿ ಭಾರೀ ಸಂಚಾರ ದಟ್ಟಣೆ ಕಂಡುಬಂದಿದೆ. ಇಂದು ಗಣೇಶ ಹಬ್ಬದ ನಿಮಿತ್ತ ಹಲವೆಡೆ ರಸ್ತೆ ಬಂದ್ ಮಾಡಿ ಸಂಚಾರಿ ಪೊಲೀಸರು ಮೆರವಣಿಗೆಗೆ ಅನುಕೂಲ ಮಾಡಿಕೊಡುತ್ತಿದ್ದಾರೆ.

ಹೂವು ಹಣ್ಣುಗಳ ದರ ಎಂದಿಗಿಂತ ದುಪ್ಪಟ್ಟಾಗಿದೆ. ತೆಂಗಿನ ಕಾಯಿಯ ದರವೂ ಭಾರೀ ಏರಿಕೆಯಾಗಿದೆ. ಸಾಮಾನ್ಯವಾಗಿ 30 ರೂ.ಗೆ ಮಾರಾಟವಾಗುತ್ತಿದ್ದ ತೆಂಗಿನ ಕಾಯಿ ಬೆಲೆ ಈಗ 40 ರ ವರೆಗೆ ತಲುಪಿದೆ. ನಿನ್ನೆಯಿಂದಲೇ ದರ ಏರಿಕೆಯಾಗಿದ್ದು, ಇಂದು ಹಬ್ಬ ಮುಗಿಯುವವರೆಗೂ ದರ ಏರಿಕೆ ಮುಂದುವರಿಯಲಿದೆ. ನಾಳೆಯಿಂದ ಸಹಜ ಸ್ಥಿತಿಗೆ ಬರಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments