Webdunia - Bharat's app for daily news and videos

Install App

ಗಣೇಶ ಚತುರ್ಥಿ ಇಫೆಕ್ಟ್: ಬೆಂಗಳೂರು ಮಾರುಕಟ್ಟೆ ಫುಲ್ ರಶ್, ಬೆಲೆ ಗಗನಕ್ಕೆ

Krishnaveni K
ಶನಿವಾರ, 7 ಸೆಪ್ಟಂಬರ್ 2024 (09:05 IST)
ಬೆಂಗಳೂರು: ಗಣೇಶ ಚತುರ್ಥಿ ನಿಮಿತ್ತ ನಿನ್ನೆ ಸಂಜೆಯಿಂದಲೇ ಬೆಂಗಳೂರಿನ ಮಾರುಕಟ್ಟೆಗಳ ಜನಜಂಗುಳಿ ಕಂಡುಬಂದಿದ್ದು, ತರಕಾರಿ, ಹೂ, ಹಣ್ಣಿನ ಬೆಲೆಯೂ ಗಗನಕ್ಕೇರಿದೆ.

ಗಣೇಶ ಪೂಜೆಗೆ ಬೇಕಾದ ಹೂ, ಹಣ್ಣು, ಬಾಳೆ ಕಂಬ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಈ ಕಾರಣಕ್ಕೆ ನಿನ್ನೆ ಸಂಜೆಯಿಂದಲೇ ಕುಟುಂಬ ಸಮೇತ ಜನ ಮಾರುಕಟ್ಟೆಗಳಿಗೆ ಲಗ್ಗೆಯಿಟ್ಟಿದ್ದಾರೆ. ಕೆಆರ್ ಮಾರುಕಟ್ಟೆ, ಶಿವಾಜಿನಗರ, ಜಯನಗರ ಮಾರುಕಟ್ಟೆ ಸೇರಿದಂತೆ ಬಹುತೇಕ ಕಡೆ ಜನ ಜಂಗುಳಿ ಕಂಡುಬಂದಿದೆ.

ಇನ್ನು, ಈ ವಾರಂತ್ಯಕ್ಕೆ ಸತತ ರಜೆಯಿರುವ ಕಾರಣಕ್ಕೆ ಸಾಕಷ್ಟು ಜನ ತಮ್ಮ ಊರುಗಳಿಗೆ ತೆರಳುತ್ತಿದ್ದು, ನಿನ್ನೆ ಸಂಜೆ ನಗರದಲ್ಲಿ ಭಾರೀ ಸಂಚಾರ ದಟ್ಟಣೆ ಕಂಡುಬಂದಿದೆ. ಇಂದು ಗಣೇಶ ಹಬ್ಬದ ನಿಮಿತ್ತ ಹಲವೆಡೆ ರಸ್ತೆ ಬಂದ್ ಮಾಡಿ ಸಂಚಾರಿ ಪೊಲೀಸರು ಮೆರವಣಿಗೆಗೆ ಅನುಕೂಲ ಮಾಡಿಕೊಡುತ್ತಿದ್ದಾರೆ.

ಹೂವು ಹಣ್ಣುಗಳ ದರ ಎಂದಿಗಿಂತ ದುಪ್ಪಟ್ಟಾಗಿದೆ. ತೆಂಗಿನ ಕಾಯಿಯ ದರವೂ ಭಾರೀ ಏರಿಕೆಯಾಗಿದೆ. ಸಾಮಾನ್ಯವಾಗಿ 30 ರೂ.ಗೆ ಮಾರಾಟವಾಗುತ್ತಿದ್ದ ತೆಂಗಿನ ಕಾಯಿ ಬೆಲೆ ಈಗ 40 ರ ವರೆಗೆ ತಲುಪಿದೆ. ನಿನ್ನೆಯಿಂದಲೇ ದರ ಏರಿಕೆಯಾಗಿದ್ದು, ಇಂದು ಹಬ್ಬ ಮುಗಿಯುವವರೆಗೂ ದರ ಏರಿಕೆ ಮುಂದುವರಿಯಲಿದೆ. ನಾಳೆಯಿಂದ ಸಹಜ ಸ್ಥಿತಿಗೆ ಬರಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments