ಗಣೇಶ ಚತುರ್ಥಿ ಇಫೆಕ್ಟ್: ಬೆಂಗಳೂರು ಮಾರುಕಟ್ಟೆ ಫುಲ್ ರಶ್, ಬೆಲೆ ಗಗನಕ್ಕೆ

Krishnaveni K
ಶನಿವಾರ, 7 ಸೆಪ್ಟಂಬರ್ 2024 (09:05 IST)
ಬೆಂಗಳೂರು: ಗಣೇಶ ಚತುರ್ಥಿ ನಿಮಿತ್ತ ನಿನ್ನೆ ಸಂಜೆಯಿಂದಲೇ ಬೆಂಗಳೂರಿನ ಮಾರುಕಟ್ಟೆಗಳ ಜನಜಂಗುಳಿ ಕಂಡುಬಂದಿದ್ದು, ತರಕಾರಿ, ಹೂ, ಹಣ್ಣಿನ ಬೆಲೆಯೂ ಗಗನಕ್ಕೇರಿದೆ.

ಗಣೇಶ ಪೂಜೆಗೆ ಬೇಕಾದ ಹೂ, ಹಣ್ಣು, ಬಾಳೆ ಕಂಬ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಈ ಕಾರಣಕ್ಕೆ ನಿನ್ನೆ ಸಂಜೆಯಿಂದಲೇ ಕುಟುಂಬ ಸಮೇತ ಜನ ಮಾರುಕಟ್ಟೆಗಳಿಗೆ ಲಗ್ಗೆಯಿಟ್ಟಿದ್ದಾರೆ. ಕೆಆರ್ ಮಾರುಕಟ್ಟೆ, ಶಿವಾಜಿನಗರ, ಜಯನಗರ ಮಾರುಕಟ್ಟೆ ಸೇರಿದಂತೆ ಬಹುತೇಕ ಕಡೆ ಜನ ಜಂಗುಳಿ ಕಂಡುಬಂದಿದೆ.

ಇನ್ನು, ಈ ವಾರಂತ್ಯಕ್ಕೆ ಸತತ ರಜೆಯಿರುವ ಕಾರಣಕ್ಕೆ ಸಾಕಷ್ಟು ಜನ ತಮ್ಮ ಊರುಗಳಿಗೆ ತೆರಳುತ್ತಿದ್ದು, ನಿನ್ನೆ ಸಂಜೆ ನಗರದಲ್ಲಿ ಭಾರೀ ಸಂಚಾರ ದಟ್ಟಣೆ ಕಂಡುಬಂದಿದೆ. ಇಂದು ಗಣೇಶ ಹಬ್ಬದ ನಿಮಿತ್ತ ಹಲವೆಡೆ ರಸ್ತೆ ಬಂದ್ ಮಾಡಿ ಸಂಚಾರಿ ಪೊಲೀಸರು ಮೆರವಣಿಗೆಗೆ ಅನುಕೂಲ ಮಾಡಿಕೊಡುತ್ತಿದ್ದಾರೆ.

ಹೂವು ಹಣ್ಣುಗಳ ದರ ಎಂದಿಗಿಂತ ದುಪ್ಪಟ್ಟಾಗಿದೆ. ತೆಂಗಿನ ಕಾಯಿಯ ದರವೂ ಭಾರೀ ಏರಿಕೆಯಾಗಿದೆ. ಸಾಮಾನ್ಯವಾಗಿ 30 ರೂ.ಗೆ ಮಾರಾಟವಾಗುತ್ತಿದ್ದ ತೆಂಗಿನ ಕಾಯಿ ಬೆಲೆ ಈಗ 40 ರ ವರೆಗೆ ತಲುಪಿದೆ. ನಿನ್ನೆಯಿಂದಲೇ ದರ ಏರಿಕೆಯಾಗಿದ್ದು, ಇಂದು ಹಬ್ಬ ಮುಗಿಯುವವರೆಗೂ ದರ ಏರಿಕೆ ಮುಂದುವರಿಯಲಿದೆ. ನಾಳೆಯಿಂದ ಸಹಜ ಸ್ಥಿತಿಗೆ ಬರಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments