Webdunia - Bharat's app for daily news and videos

Install App

ನಮ್ಮ ಮೆಟ್ರೋ ಟಿಕೆಟ್ ಬೆಲೆ ಏರಿಕೆ ಬೇಕಿತ್ತಾ, ಬೆಂಗಳೂರು ತುಂಬಾ ವಾಯುಮಾಲಿನ್ಯ, ಟ್ರಾಫಿಕ್

Krishnaveni K
ಗುರುವಾರ, 6 ಮಾರ್ಚ್ 2025 (09:52 IST)
ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ಬೆಲೆ ಏರಿಕೆ ಮಾಡಿದ್ದೇ ಮಾಡಿದ್ದು, ಈಗ ಬೆಂಗಳೂರಿನಲ್ಲಿ ವಾಯುಮಾಲಿನ್ಯ, ಟ್ರಾಫಿಕ್ ಹೆಚ್ಚಾಗಿದೆ ಎಂದು ವರದಿ ಬಂದಿದೆ.

ಕಳೆದ ತಿಂಗಳಷ್ಟೇ ಏಕಾಏಕಿ ಮೆಟ್ರೋ ಪ್ರಯಾಣ ದರ ಏರಿಕೆಯಾಗುತ್ತದೆ. ಏಕಾಏಕಿ ಟಿಕೆಟ್ ದರ ದುಪ್ಪಟ್ಟಾಗಿದ್ದರಿಂದ ಮಧ್ಯಮ ವರ್ಗದ ಜನ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದರು. ಹಲವರು ನಿತ್ಯ ಅನಿವಾರ್ಯವಾಗಿ ಸಂಚರಿಸುವವರನ್ನು ಬಿಟ್ಟರೆ ಉಳಿದವರು ಮೆಟ್ರೋಗೆ ಗುಡ್ ಬೈ ಹೇಳಿದ್ದಾರೆ.

ಇತ್ತೀಚೆಗೆ ಮೆಟ್ರೋ ನಿಲ್ದಾಣಗಳಲ್ಲಿ ಮೊದಲಿನಷ್ಟು ಪ್ರಯಾಣಿಕರಿಲ್ಲ. ಹಲವು ಜನ ಮೆಟ್ರೋ ಬಳಸುವುದನ್ನೇ ಬಿಟ್ಟಿದ್ದಾರೆ. ಮೆಟ್ರೋ ಪ್ರಯಾಣ ದರ ಏರಿಕೆಯಾಗಿರುವುದರಿಂದ ಅನೇಕರು ಖಾಸಗಿ ವಾಹನ, ಕ್ಯಾಬ್ ಇಲ್ಲವೇ ಬಸ್ ಕಡೆಗೆ ಮುಖ ಮಾಡಿದ್ದಾರೆ.

ಇದರಿಂದಾಗಿ ನಗರದಲ್ಲಿ ಈಗ ಖಾಸಗಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಟ್ರಾಫಿಕ್ ಜಾಮ್ ಹೆಚ್ಚಾಗಿದೆ. ಸಹಜವಾಗಿಯೇ ವಾಹನಗಳ ದಟ್ಟಣೆಯಿಂದ ನಗರದಲ್ಲಿ ವಾಯುಮಾಲಿನ್ಯವೂ ಮಿತಿ ಮೀರಿದೆ. ನಗರದಲ್ಲಿ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಬೇಕು ಆ ಮೂಲಕ ವಾಯುಮಾಲಿನ್ಯ ಕಡಿಮೆ ಮಾಡಬೇಕು ಎಂಬ ಉದ್ದೇಶದಿಂದಲೇ ಮೆಟ್ರೋ ಆರಂಭಿಸಲಾಗಿತ್ತು. ಆದರೆ ಈಗ ಆ ಉದ್ದೇಶವೇ ಈಡೇರುತ್ತಿಲ್ಲ. ಹಾಗಿದ್ದ ಮೇಲೆ ಮೆಟ್ರೋದಿಂದ ಏನು ಉಪಯೋಗವಾಯ್ತು ಎಂದು ಜನ ಕೇಳುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments