Select Your Language

Notifications

webdunia
webdunia
webdunia
webdunia

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

Bengaluru Potholes

Sampriya

ಬೆಂಗಳೂರು , ಶುಕ್ರವಾರ, 21 ನವೆಂಬರ್ 2025 (18:47 IST)
ಬೆಂಗಳೂರು: ಇದು ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ ಅಥವಾ ಕಸದ ಬೆಂಗಳೂರೇ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ಅವರು ಪ್ರಶ್ನೆ ಹಾಕಿದ್ದಾರೆ. 

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವರು ಅಧಿಕಾರ ಹಂಚಿಕೆಯಲ್ಲಿದ್ದಾರೆ. ಹಳ್ಳ ಗುಂಡಿಗಳ ಕಡೆ ಗಮನ ಕೊಡುತ್ತಿಲ್ಲ; ಇದು ದುರಹಂಕಾರದ ಪರಮಾವಧಿ ಎಂದು ಟೀಕಿಸಿದರು. ಇಡೀ ಕರ್ನಾಟಕದಲ್ಲಿ ಹಳ್ಳ ಬಿದ್ದ ರಸ್ತೆಗಳು, ಕಸದ ರಾಶಿ, ಅಭಿವೃದ್ಧಿ ಶೂನ್ಯ, ಲೂಟಿ- ಇಷ್ಟೇನಾ ನಿಮ್ಮ ಎರಡೂವರೆ ವರ್ಷದ ಸಾಧನೆ ಎಂದು ಕೇಳಿದರು.

ಮಾನ ಮರ್ಯಾದೆ ಇದ್ದರೆ ಗುಂಡಿ ಮುಚ್ಚಬೇಕು. ರಸ್ತೆ ಡಾಂಬರೀಕರಣ ಮಾಡಿ ಎಂದು ಒತ್ತಾಯಿಸಿದರು. ಮಾತೆತ್ತಿದರೆ ಹಣ ಬಿಡುಗಡೆ ಮಾಡಿದ್ದೇವೆ ಎನ್ನುತ್ತಾರೆ. ಆ ಹಣ ಎಲ್ಲಿ ಹೋಗಿದೆ ಎಂದು ಪ್ರಶ್ನಿಸಿದರು. ಕಳೆದ 4 ತಿಂಗಳಿನಿಂದ ಹಣ ಬಿಡುಗಡೆ ಮಾಡಿದ್ದೇವೆ ಎನ್ನುತ್ತೀರಲ್ಲವೇ?. ಇದು ಆಸ್ಪತ್ರೆ ರಸ್ತೆ. ಇಲ್ಲಿ ಪ್ರತಿಭಟನೆ, ಪರಿಶೀಲನೆಗೆ ಬಂದಿದ್ದೇವೆ ಎಂದು ತಿಳಿಸಿದರು. ಈ ರಸ್ತೆಯಲ್ಲಿ ಹೋದರೆ ತನ್ನಿಂತಾನೇ ಹೆರಿಗೆ ಆಗುತ್ತದೆ ಎಂದು ವ್ಯಂಗ್ಯವಾಗಿ ತಿಳಿಸಿದರು. ಒಂದು ಕಿಮೀ ರಸ್ತೆಯಲ್ಲಿ 400 ಹಳ್ಳ ಬಿದ್ದಿದೆ ಎಂದು ಗಮನ ಸೆಳೆದರು

Share this Story:

Follow Webdunia kannada

ಮುಂದಿನ ಸುದ್ದಿ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌