Webdunia - Bharat's app for daily news and videos

Install App

ಪ್ರಾಣ ರಕ್ಷಣೆಗೆ ಅರ್ಧಗಂಟೆ ಹೋರಾಡಿದರು! ನೋಡುತ್ತಿದ್ದಂತೇ ಪ್ರಾಣ ಬಿಟ್ಟರು!

Webdunia
ಶನಿವಾರ, 9 ಸೆಪ್ಟಂಬರ್ 2017 (08:44 IST)
ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ರಾತ್ರಿ ಸುರಿದ ಮಳೆದ ಅವಾಂತರವೆಬ್ಬಿಸಿದೆ. ಕಾರಿನಲ್ಲಿದ್ದ ಮೂವರು ಸೇರಿದಂತೆ ಒಟ್ಟು ನಾಲ್ಕು ಮಂದಿ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.

 
ಮಿನರ್ವ ಸರ್ಕಲ್ ಬಳಿ ಕಾರಿನಲ್ಲಿ ಕುಳಿತಿದ್ದ ಒಂದೇ ಕುಟುಂಬದ ಮೂವರು ಮರ ಉರುಳಿ ಬಿದ್ದ ಪರಿಣಾಮ ಹೊರ ಬರಲಾಗದೆ ಉಸಿರುಗಟ್ಟಿಸಾವನ್ನಪ್ಪಿದ್ದಾರೆ. ಕಾರಿನ ಮುಂದಿನ ಸೀಟಿನಲ್ಲಿದ್ದ ಇಬ್ಬರು ಗಾಜು ಒಡೆದು ಹೊರ ಬಂದು ಪ್ರಾಣ ರಕ್ಷಿಸಿಕೊಂಡಿದ್ದಾರೆ.

ಹಿಂಬದಿಯಲ್ಲಿ ಕೂತಿದ್ದ ಮೂವರು ಸುಮಾರು ಅರ್ಧ ಗಂಟೆಗಳ ಕಾಲ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದರಾದರೂ ಹೊರಬರಲಾಗದೇ ಸಾವನ್ನಪ್ಪಿದ್ದಾರೆ. ಸ್ಥಳೀಯರು ಇವರನ್ನು ರಕ್ಷಿಸಲು ಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ. ಅಗ್ನಿ ಶಾಮಕ ದಳದವರು  ಬರುವಷ್ಟರಲ್ಲಿ ಮೂವರ ಪ್ರಾಣ ಪಕ್ಷಿ ಹೊರಟು ಹೋಗಿತ್ತು.

ಮೃತರನ್ನು ಭಾರತಿ, ಜಗದೀಶ್ ಮತ್ತು ರಮೇಶ್ ಎಂದು ಗುರುತಿಸಲಾಗಿದೆ. ಇನ್ನೊಂದು ದುರಂತದಲ್ಲಿ ವರುಣ್ ಎಂಬ ಯುವಕ ನಡೆದಾಡುಕೊಂಡು ಹೋಗುತ್ತಿದ್ದಾಗ ಫುಟ್ ಪಾತ್ ಮೇಲೆ ಹಾಕಿದ್ದ ಸ್ಲಾಬ್ ಜಾರಿ ಡ್ರೈನೇಜ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಇಂದು ಬೆಳಗಿನ ಜಾವ ಆತನ ಶವ ಪತ್ತೆಯಾಗಿದೆ.

ಇದನ್ನೂ ಓದಿ.. ಪಾಕ್ ಕ್ರಿಕೆಟರ್ ಜತೆ ಮದುವೆ ಸುದ್ದಿ ಬಗ್ಗೆ ಬೆಡಗಿ ತಮನ್ನಾ ಹೇಳಿದ್ದೇನು?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

ಮುಂದಿನ ಸುದ್ದಿ
Show comments