Webdunia - Bharat's app for daily news and videos

Install App

ಬೆಂಗಳೂರು ಮಳೆಯಿಂದ ಅವಾಂತರವಾಗಿದ್ದರೆ ಈ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಬಹುದು

Krishnaveni K
ಬುಧವಾರ, 16 ಅಕ್ಟೋಬರ್ 2024 (10:19 IST)
ಬೆಂಗಳೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಈ ನಡುವೆ ಮಳೆಯಿಂದಾದ ಅವಾಂತರಗಳಿಂದ ಜನರ ಸಮಸ್ಯೆ ಆಲಿಸಲು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ರಂಗಕ್ಕಿಳಿದಿದ್ದಾರೆ.

ಬಿಬಿಎಂಪಿ ವಾರ್ ರೂಂಗೆ ಎಂಟ್ರಿ ಕೊಟ್ಟಿರುವ ಡಿಕೆ ಶಿವಕುಮಾರ್ ಸ್ವತಃ ತಾವೇ ಜನರ ಕರೆಗಳಿಗೆ ಉತ್ತರಿಸಿದ್ದಾರೆ. ನಗರದಲ್ಲಿ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದು, ಕೆಲವೆಡೆ ಕೊಳಚೆ ನೀರು ಮನೆಯೊಳಗೇ ನುಗ್ಗಿದೆ. ಇದರಿಂದಾಗಿ ಜನ ಪರದಾಡುವಂತಾಗಿದೆ.

ಜನರು ಅವ್ಯವಸ್ಥೆಗೆ ಬಿಬಿಎಂಪಿಗೆ ಹಿಡಿಶಾಪ ಹಾಕುತ್ತಿದ್ದಾರೆ. ವಿಶೇಷವಾಗಿ ನಿನ್ನೆ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್, ಮಾನ್ಯತಾ ಟೆಕ್ ಪಾರ್ಕ್ ಬಳಿ ರಸ್ತೆಯಿಡೀ ಜಲಾವೃತವಾಗಿದ್ದ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಇಂದೂ ಕೂಡಾ ಮಳೆಯ ವಾತಾವರಣ ಮುಂದುವರಿದಿದೆ.

ಅಕ್ಟೋಬರ್ 19 ರವರೆಗೂ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಹೀಗಾಗಿ ಸಮಸ್ಯೆಗಳು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಯಶವಂತಪುರ ಠಾಣಾ ವ್ಯಾಪ್ತಿಯ ರಾಜಕುಮಾರ್ ಸಮಾಧಿ ರಸ್ತೆಯಲ್ಲಿ ಮರ ಬಿದ್ದಿರುವ ಕಾರಣ ರಸ್ತೆ ಸಂಚಾರ ಬಂದ್ ಆಗಿದೆ. ಮಾನ್ಯತಾ ಟೆಕ್ ಪಾರ್ಕ್ ಬಳಿ ರಸ್ತೆಯಲ್ಲಿ ನೀರು ತುಂಬಿದ್ದ ಕಾರಣ ಇಂದೂ ಕೂಡಾ ಸಂಚಾರಕ್ಕೆ ಅಡಚಣೆಯಾಗಲಿದೆ. ಯಾವುದೇ ತುರ್ತು ಸಂದರ್ಭದಲ್ಲಿ 112 ಸ್ಥಾನಕ್ಕೆ ಕರೆ ಮಾಡಿ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments