ಬೆಂಗಳೂರು ಮಳೆಯಿಂದ ಅವಾಂತರವಾಗಿದ್ದರೆ ಈ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಬಹುದು

Krishnaveni K
ಬುಧವಾರ, 16 ಅಕ್ಟೋಬರ್ 2024 (10:19 IST)
ಬೆಂಗಳೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಈ ನಡುವೆ ಮಳೆಯಿಂದಾದ ಅವಾಂತರಗಳಿಂದ ಜನರ ಸಮಸ್ಯೆ ಆಲಿಸಲು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ರಂಗಕ್ಕಿಳಿದಿದ್ದಾರೆ.

ಬಿಬಿಎಂಪಿ ವಾರ್ ರೂಂಗೆ ಎಂಟ್ರಿ ಕೊಟ್ಟಿರುವ ಡಿಕೆ ಶಿವಕುಮಾರ್ ಸ್ವತಃ ತಾವೇ ಜನರ ಕರೆಗಳಿಗೆ ಉತ್ತರಿಸಿದ್ದಾರೆ. ನಗರದಲ್ಲಿ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದು, ಕೆಲವೆಡೆ ಕೊಳಚೆ ನೀರು ಮನೆಯೊಳಗೇ ನುಗ್ಗಿದೆ. ಇದರಿಂದಾಗಿ ಜನ ಪರದಾಡುವಂತಾಗಿದೆ.

ಜನರು ಅವ್ಯವಸ್ಥೆಗೆ ಬಿಬಿಎಂಪಿಗೆ ಹಿಡಿಶಾಪ ಹಾಕುತ್ತಿದ್ದಾರೆ. ವಿಶೇಷವಾಗಿ ನಿನ್ನೆ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್, ಮಾನ್ಯತಾ ಟೆಕ್ ಪಾರ್ಕ್ ಬಳಿ ರಸ್ತೆಯಿಡೀ ಜಲಾವೃತವಾಗಿದ್ದ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಇಂದೂ ಕೂಡಾ ಮಳೆಯ ವಾತಾವರಣ ಮುಂದುವರಿದಿದೆ.

ಅಕ್ಟೋಬರ್ 19 ರವರೆಗೂ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಹೀಗಾಗಿ ಸಮಸ್ಯೆಗಳು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಯಶವಂತಪುರ ಠಾಣಾ ವ್ಯಾಪ್ತಿಯ ರಾಜಕುಮಾರ್ ಸಮಾಧಿ ರಸ್ತೆಯಲ್ಲಿ ಮರ ಬಿದ್ದಿರುವ ಕಾರಣ ರಸ್ತೆ ಸಂಚಾರ ಬಂದ್ ಆಗಿದೆ. ಮಾನ್ಯತಾ ಟೆಕ್ ಪಾರ್ಕ್ ಬಳಿ ರಸ್ತೆಯಲ್ಲಿ ನೀರು ತುಂಬಿದ್ದ ಕಾರಣ ಇಂದೂ ಕೂಡಾ ಸಂಚಾರಕ್ಕೆ ಅಡಚಣೆಯಾಗಲಿದೆ. ಯಾವುದೇ ತುರ್ತು ಸಂದರ್ಭದಲ್ಲಿ 112 ಸ್ಥಾನಕ್ಕೆ ಕರೆ ಮಾಡಿ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments