ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ನಿಯಂತ್ರಣವೂ ಇಲ್ಲ, ಕಾನೂನು ಕಾಪಾಡುವ ಆಸಕ್ತಿಯೂ ಇಲ್ಲ: ಆರ್‌ ಅಶೋಕ್‌

Sampriya
ಭಾನುವಾರ, 18 ಆಗಸ್ಟ್ 2024 (17:29 IST)
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಸಮಾಜ ಘಾತುಕ ಶಕ್ತಿಗಳಿಗೆ ಕಾನೂನಿನ ಭಯವೇ ಇಲ್ಲದಂತಾಗಿದ್ದು, ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡಲಾಗದ ಪರಿಸ್ಥಿತಿ ಎದುರಾಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ನಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಇಡೀ ರಾಜ್ಯವನ್ನ ಬೆಚ್ಚಿ ಬೀಳಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಫೋಸ್ಟ್ ಹಂಚಿಕೊಂಡಿರುವ ಅವರು, ಸಿದ್ದರಾಮಯ್ಯ ಆಡಳಿತದಲ್ಲಿ ಮಹಿಳೆಯರಿಗೆ ಶಾಂತಿ, ಸುರಕ್ಷತೆಯ ಗ್ಯಾರಂಟಿ ಯಾವಾಗ ಸಿಗಲಿದೆ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಸಮಾಜ ಘಾತುಕ ಶಕ್ತಿಗಳಿಗೆ ಕಾನೂನಿನ ಭಯವೇ ಇಲ್ಲದಂತಾಗಿದ್ದು, ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡಲಾಗದ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ನಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಇಡೀ ರಾಜ್ಯವನ್ನ ಬೆಚ್ಚಿ ಬೀಳಿಸಿದೆ.

ಮಹಿಳೆಯರ ಮೇಲಿನ ಹಲ್ಲೆ, ಅತ್ಯಾಚಾರದ ಘಟನೆಗಳು ಪದೇ ಪದೇ ಮರುಕಳಿಸುತ್ತಲೇ ಇರುವುದರಿಂದ ರಾಜ್ಯದ ಘನತೆ, ವರ್ಚಸ್ಸಿಗೆ ಕುತ್ತು ಬಂದಿದೆ. ಬೆಂಗಳೂರಿನಂತಹ ವಿಶ್ವನಗರಿಯ ಹೆಸರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟು ಹೆಸರು ಬರುತ್ತಿದೆ.

ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಬಣ ಬಡಿದಾಟ, ಆಂತರಿಕ ಕಲಹ, ರಾಜಕೀಯ ಮೇಲಾಟದಲ್ಲೇ ನಿರತವಾಗಿರುವ ಕಾಂಗ್ರೆಸ್
 ಸರ್ಕಾರಕ್ಕೆ ಆಡಳಿತದ ಮೇಲೆ ನಿಯಂತ್ರಣವೂ ಇಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುವ ಆಸಕ್ತಿಯೂ ಇಲ್ಲ.

ಮಹಿಳೆಯರಿಗೆ ಶಾಂತಿ, ಸುರಕ್ಷತೆಯ ಗ್ಯಾರೆಂಟಿ ಯಾವಾಗ ಸಿಗಲಿದೆ ಸಿಎಂ ಸಿದ್ದರಾಮಯ್ಯನವರೇ?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಿದರೆ ಒಳ್ಳೆಯದಾ, ತೊಂದರೆಯಾ, ಇಲ್ಲಿದೆ ವಿಶ್ಲೇಷಣೆ

ಯೋಧರ ನೋಡಿ ಹೆದರಿದ ಬಾಲಕಿಗೆ ತಂದೆ ಮಾಡಿದ್ದೇನು: ವಿಡಿಯೋ ಕೊನೆಯವರೆಗೂ ನೋಡಿ Video

ಮೋದಿ ಜೀಯವರ ಮಿತವ್ಯಯದ ಕರೆಗೆ ಎಲ್ಲರೂ ಸಹಕರಿಸೋಣ: ವಿಜಯೇಂದ್ರ

ಆಕ್ಸಿಡೆಂಟ್ ಆಗಿ ಐಸಿಯುವಿನಲ್ಲಿದ್ದರೂ ವಧುವಿನ ಕೈ ಬಿಡದ ವರ ಮಾಡಿದ್ದೇನು Video

ಸ್ವಲ್ಪವೂ ಸೆನ್ಸ್ ಇಲ್ಲ...ಹೊಸ ಕಾಂಕ್ರೀಟ್ ಮೇಲೆ ಸ್ಕೂಟಿ ಓಡಿಸಿ ಕೆಸರು ಗೆದ್ದೆ ಮಾಡಿದ ಭೂಪ Video

ಮುಂದಿನ ಸುದ್ದಿ
Show comments