Webdunia - Bharat's app for daily news and videos

Install App

ಮತ್ತೆ ಹೆಚ್ಚಾಯಿತು ಬೆಂಗಳೂರು ರಸ್ತೆ ಗುಂಡಿಗಳು

Webdunia
ಸೋಮವಾರ, 24 ಅಕ್ಟೋಬರ್ 2022 (13:35 IST)
ನಗರದಲ್ಲಿ ಪ್ರತಿ ಮಳೆ ಬಂದಾಗಲೂ ರಸ್ತೆ ಗುಂಡಿಗಳ ಸಮಸ್ಯೆ ಹೆಚ್ಚುತ್ತಿದೆ. ಮಳೆ ನಿಂತ ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸವನ್ನು ಬಿಬಿಎಂಪಿ ಮಾಡುತ್ತಿದ್ದರೂ ಮತ್ತೆ ಮಳೆ ಬಂದಾಗ ಮುಚ್ಚಿದ ಗುಂಡಿಗಳು ಬಾಯ್ತೆರೆಯುತ್ತಿದ್ದು, ಪಾಲಿಕೆಯು ಗುಣಮಟ್ಟದ ಕೆಲಸ ಮಾಡುತ್ತಿದೆಯೋ ಇಲ್ಲವೋ ಎಂಬುದು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ. ಜೊತೆಗೆ ಮಳೆ ನಿಲ್ಲದೆ ರಸ್ತೆ ಗುಂಡಿಗಳಿಗೆ ಮುಕ್ತಿ ಕೊಡಲು ಅಸಾಧ್ಯವೆಂಬುದು ಎಂದು ಪಾಲಿಕೆ ಮೂಲಗಳು ತಿಳಿಸಿವೆ. ರಸ್ತೆ ಗುಂಡಿಗಳ ಮುಚ್ಚುವ ವಿಚಾರದಲ್ಲಿ ಬಿಬಿಎಂಪಿಯನ್ನು ರಾಜ್ಯ ಹೈಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದ್ದರ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿದ್ದ ಪಾಲಿಕೆಯು ಮೇ ತಿಂಗಳಿನಿಂದ ಈವರೆಗೆ ಸುಮಾರು 27,200ಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಿತ್ತು. ಈ ಪೈಕಿ ಈಗಾಗಲೇ 20 ಸಾವಿರಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚಿರುವ ಲೆಕ್ಕಾಚಾರ ಬಿಬಿಎಂಪಿಯದ್ದು. ಪಾಲಿಕೆಯ ರಸ್ತೆ ಮತ್ತು ಮೂಲಸೌಕರ್ಯ ವಿಭಾಗದ ಅಧಿಕಾರಿಗಳ ಪ್ರಕಾರ ಆಗಸ್ಟ್‌ ತಿಂಗಳಲ್ಲಿ ರಸ್ತೆ ಗುಂಡಿಗಳ ಸಂಖ್ಯೆ 7 ಸಾವಿರಕ್ಕಿಂತಲೂ ಕಡಿಮೆಯಾಗಿತ್ತು ಆದರೆ, ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ನಗರದಲ್ಲಿ ಮತ್ತೆ ಮುಚ್ಚಿದ್ದ ಗುಂಡಿಗಳು ಸಹ ಬಾಯ್ತೆರೆದಿದ್ದು, ಪ್ರಸ್ತುತ 18 ಸಾವಿರಕ್ಕೂ ಅಧಿಕ ಗುಂಡಿಗಳಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments