ಬೆಂಗಳೂರಿನಲ್ಲಿ ಅಧಿಕಾರಿಗಳ ಆಟ ಪ್ರಯಾಣಿಕರ ಪ್ರಾಣ ಸಂಕಟ ..!!

Webdunia
ಸೋಮವಾರ, 18 ಅಕ್ಟೋಬರ್ 2021 (15:04 IST)
ಒಂದೆಡೆ ಪೆಟ್ರೋಲ್ ಮತ್ತು ಡೀಸೆಲ್ ದರ ಶರವೇಗದಲ್ಲಿ ಏರುತ್ತಿದ್ದರೆ, ಅದಕ್ಕೆ ತದ್ವಿರುದ್ಧವಾಗಿ ನಗರದ ಅಭಿವೃದ್ಧಿ ಕಾಮಗಾರಿಗಳು ಆಮೆ ವೇಗದಲ್ಲಿ ನಡೆಯುತ್ತಿವೆ. ಕಾಮಗಾರಿಗಳ ಸಲುವಾಗಿ ವರ್ಷಾನುಗಟ್ಟಲೆಯಿಂದ ರಸ್ತೆಗಳನ್ನು ಬಂದ್ ಮಾಡಿರುವುದರಿಂದ ಕೊಂಕಣ ಸುತ್ತಿ ಮೈಲಾರ ಸೇರಬೇಕಾದ ಪಾಡು ವಾಹನ ಸವಾರರದ್ದು.ಸುತ್ತಿ ಬಳಸಿ ಸಂಚರಿಸಬೇಕಾದ ಅನಿವಾರ್ಯ ಸ್ಥಿತಿ ವಾಹನ ಸವಾರರ ಕಿಸೆಗೂ ಕತ್ತರಿ ಬೀಳುವಂತೆ ಮಾಡುತ್ತಿದೆ.
 
ಶಿವಾನಂದ ವೃತ್ತ, ಅರಮನೆ ರಸ್ತೆ, ಮಹಾತ್ಮ ಗಾಂಧಿ ರಸ್ತೆ, ಗೂಡ್‌ಶೆಡ್ ರಸ್ತೆಗಳಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ಸಮಸ್ಯೆಗಳು ಇದಕ್ಕೆ ಉದಾಹರಣೆಗಳು. ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹109 ದಾಟಿದ್ದರೆ, ಡೀಸೆಲ್ ದರ ಪ್ರತಿ ಲೀಟರ್‌ಗೆ ₹100ರ ಗಡಿ ದಾಟಿದೆ. ತಮ್ಮದಲ್ಲದ ತಪ್ಪಿಗೆ ವಾಹನ ಸವಾರರು ದಿನವೂ ಪೆಟ್ರೋಲ್ ಮತ್ತು ಡೀಸೆಲ್‌ಗಾಗಿ ಹೆಚ್ಚುವರಿ ವೆಚ್ಚ ಮಾಡುವ ಮೂಲಕ ದಂಡ ತೆರುತ್ತಿದ್ದಾರೆ.
 
ಶಿವಾನಂದ ವೃತ್ತದಲ್ಲಿ ಉಕ್ಕಿನ ಸೇತುವೆ ಕಾಮಗಾರಿ ಆರಂಭವಾಗಿ ಐದು ವರ್ಷಗಳೇ ಕಳೆದಿವೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲೇ ಶಿವಾನಂದ ವೃತ್ತದಲ್ಲಿ ಕಾಮಗಾರಿ ಆರಂಭವಾಗಿತ್ತು. ಇದಾದ ನಂತರ ಮೂರು ಸರ್ಕಾರಗಳು ಬದಲಾದರೂ ಶಿವಾನಂದ ವೃತ್ತದ ಮೇಲ್ಸೇತುವೆ ಕಾಮಗಾರಿಗೆ ಮುಕ್ತಿ ಸಿಗುವ ಲಕ್ಷಣಗಳು ಕಾಣಿಸುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಮುಂದಿನ ಸುದ್ದಿ
Show comments