Webdunia - Bharat's app for daily news and videos

Install App

ಕನ್ನಡದಲ್ಲಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಟಿ.ಆರ್​. ಅಶ್ವತ್ಥ್​ ನಾರಾಯಣ್​ನಿಧನ

Webdunia
ಸೋಮವಾರ, 7 ಫೆಬ್ರವರಿ 2022 (21:15 IST)
ಬಾಲನಟನಾಗಿ ಬಹಳ ಚಿಕ್ಕ ವಯಸ್ಸಿನಲ್ಲೇ ರಂಗಭೂಮಿಗೆ ಪದಾರ್ಪಣೆ ಮಾಡಿದ ಅಶ್ವತ್ಥ್ ನಾರಾಯಣ್, 'ವಾಲ್ಮೀಕಿ' ಮೂಲಕ ಚಿತ್ರರಂಗಕ್ಕೆ ನಟನಾಗಿ ಬಂದರು. ತ.ರಾ.ಸು ಅವರ ಕಾದಂಬರಿ ನಿರ್ಮಾಣವಾದ ಡಾ. ರಾಜಕುಮಾರ್ ಅಭಿನಯದ 'ಚಂದವಳ್ಳಿಯ ತೋಟ' ಚಿತ್ರದಲ್ಲಿ, ಅವರು ಸುಬ್ಬಾಭಟ್ಟ ಎಂಬ ನೆಗೆಟಿವ್ ಶೇಡ್ನ ಪಾತ್ರದಲ್ಲಿ ನಟಿಸಿದ್ದಾರೆ. ಇದು ಅವರ ವೃತ್ತಿಬದುಕಿಗೆ ದೊಡ್ಡ ಮಟ್ಟದಲ್ಲಿ ತಿರುವು ಕೊಟ್ಟ ಚಿತ್ರವಾಯಿತು.
ಈ ನಂತರ ಚಿತ್ರದ ಹಲವು ಚಿತ್ರಗಳಲ್ಲಿ, ಡಾ. ರಾಜಕುಮಾರ್ ಅಭಿನಯದ ಹಲವಾರು ಚಿತ್ರಗಳಲ್ಲಿ ಅಶ್ವತ್ಥ್ ನಾರಾಯಣ್ ಪೋಷಕ ಪಾತ್ರಗಳಲ್ಲಿ ನಟಿಸಿದರು. ಬಹುತೇಕ ಚಿತ್ರಗಳಲ್ಲಿ ಅವರು ಅರ್ಚಕರಾಗಿ ನಟಿಸಿದ್ದರು. 'ಬಬ್ರುವಾಹನ', 'ಕವಿರತ್ನ ಕಾಳಿದಾಸ', 'ದಂಗೆ ಎದ್ದ ಮಕ್ಕಳು', 'ತಾಯಿಗೆ ತಕ್ಕ ಮಗ', 'ಅನುರಾಗ ಅರಳಿತು', "ಪ್ರೊಫೆಸರ್ ಹುಚ್ಚೂರಾಯ', 'ಕಾಮನ ಬಿಲ್ಲು' ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಡಾ. ರಾಜ್ಕುಮಾರ್ ಕುಟುಂಬದ ನಾಲ್ಕು ತಲೆಮಾರಿನ ಕಲಾವಿದರೊಂದಿಗೆ ನಟಿಸಿದ ಹೆಗ್ಗಳಿಕೆ ಅಶ್ವತ್ಥ್ ನಾರಾಯಣ್ ಅವರಿಗಿದೆ. ಡಾ. ರಾಜ್ ಅವರ ತಂದೆ ಸಿಂಗನಲ್ಲೂರು ಪುಟ್ಟಸ್ವಾಮಯ್ಯ ಜತೆ ನಟಿಸಿದ್ದ ಅವರು, ರಾಜ್ ಮೊಮ್ಮಗ ವಿನಯ್ ರಾಜಕುಮಾರ್ ಅಭಿನಯದ 'ಸಿದ್ಧಾರ್ಥ' ಚಿತ್ರದಲ್ಲೂ ನಟಿಸಿದ್ದರು. ಇತ್ತೀಚಿನ ದಿನಗಳಲ್ಲಿ ನಟನೆಯಿಂದ ದೂರವಿದ್ದರು.
ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅಶ್ವತ್ಥ್ ನಾರಾಯಣ್ ಅವರು ಭಾನುವಾರ ಬೆಳಗ್ಗೆ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು. ಇವರು ಮೂವರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments