Webdunia - Bharat's app for daily news and videos

Install App

ಈವತ್ತು ಬೆಂಗಳೂರಿನಲ್ಲಿ ಬೇಕಾದಂಗೆ ಓಡಾಡಲು ವಾಹನ ಸಿಗಲ್ಲ!

Webdunia
ಭಾನುವಾರ, 11 ಫೆಬ್ರವರಿ 2018 (08:25 IST)
ಬೆಂಗಳೂರು: ಗಾಬರಿಯಾಗಬೇಡಿ. ಬೆಂಗಳೂರಲ್ಲಿ ಈವತ್ತು ವಿರಳ ಸಂಚಾರ ದಿನ ಆಚರಿಸಲಾಗುತ್ತಿದೆ. ಹಾಗಂತ ಓಡಾಟಕ್ಕೆ ವಾಹನ ಇರಲ್ಲಅಂತಲ್ಲ.
 

ಇದು ಬೆಂಗಳೂರಿನ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು ಸರ್ಕಾರ ಹೂಡಿರುವ ಹೊಸ ಯೋಜನೆ. ಅದರಂತೆ ಈವತ್ತು ಸಾರ್ವಜನಿಕರು ತಮ್ಮ ಖಾಸಗಿ ವಾಹನ ಬಿಟ್ಟು ಹೆಚ್ಚಾಗಿ ಸಾರ್ವಜನಿಕ ಸಾರಿಗೆ ವಾಹನಗಳನ್ನು ಬಳಸಲು ಪ್ರೇರೇಪಿಸುವ ಸಲುವಾಗಿ ವಿರಳ ಸಂಚಾರ ದಿನ ಆಚರಿಸಲಾಗುತ್ತಿದೆ.

ಇಂದು ಕಡಿಮೆ ದರದಲ್ಲಿ ಸಾರ್ವಜನಿಕರು ನಗರದಲ್ಲಿ ಪ್ರಯಾಣ ಮಾಡಬಹುದು. ಬಿಎಂಟಿಸಿ ದೈನಂದಿನ ಪಾಸ್ ದರ ಎಂದಿಗಿಂತ 5 ರೂ. ಕಡಿಮೆ ಇರಲಿದೆ. ಬಸ್ ಬೇಡಿಕೆ ಹೆಚ್ಚು ಇರುವ ಸ್ಥಳಗಳಿಗೆ ಇಂದು ಹೆಚ್ಚುವರಿಯಾಗಿ ಬಸ್ ಸಂಚರಿಸಲಿದೆ. ಬೆಂಗಳೂರು ಮೆಟ್ರೋ ಕೂಡಾ ಈ ಅಭಿಯಾನದಲ್ಲಿ ಕೈ ಜೋಡಿಸಲಿದೆ. ಇದು ಯಶಸ್ವಿಯಾದರೆ ಇನ್ನು ಮುಂದೆ ತಿಂಗಳಲ್ಲಿ ಒಂದು ದಿನವಾದರೂ ವಿರಳ ಸಂಚಾರ ದಿನ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments