Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಇಂದೂ ಮಳೆ: ದಟ್ಟ ಮೋಡ ಕವಿದ ವಾತಾವರಣ, ಬೇಗನೇ ಮನೆ ಸೇರಿಕೊಳ್ಳಿ

Krishnaveni K
ಭಾನುವಾರ, 6 ಅಕ್ಟೋಬರ್ 2024 (17:51 IST)
ಬೆಂಗಳೂರು: ನಿನ್ನೆ ರಾತ್ರಿಯಿಡೀ ಮಳೆ ಸುರಿದು ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ಇಂದೂ ಬೆಂಗಳೂರಿಗರು ಮತ್ತೆ ಮಳೆಗೆ ಸಜ್ಜಾಗಬೇಕಿದೆ. ಇದೀಗ ದಟ್ಟ ಮೋಡ ಕವಿದ ವಾತಾವರಣವಿದ್ದು ಇಂದೂ ಸಂಜೆ ಮಳೆಯಾಗಲಿದೆ.

ಹವಾಮಾನ ಇಲಾಖೆ ಈಗಾಗಲೇ ಮುಂದಿನ ಎರಡು ದಿನಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿತ್ತು. ಹೀಗಾಗಿ ಇಂದೂ ಮಳೆಯಾಗಲಿದೆ. ನಿನ್ನೆ ಮಳೆಯಿಂದಾಗಿ ಕೆಲವು ಮನೆಗಳಿಗೆ ನೀರು ನುಗ್ಗಿದ್ದರೆ, ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
 
ಇದರ ಜೊತೆಗೆ ಕೆಲವು ಕಡೆ ಕಂಪೌಂಡ್ ಕುಸಿತು, ರಸ್ತೆ ಕುಸಿದು ಅನಾಹುತಗಳಾಗಿವೆ. ಒಂದು ಮಳೆಗೇ ಈ ಪರಿಸ್ಥಿತಿಯಾದರೆ ಹೇಗೆ ಎಂದು ಜನ ಹಿಡಿಶಾಪ ಹಾಕುತ್ತಿದ್ದಾರೆ. ಇದರ ನಡುವೆ ಇಂದೂ ಮಳೆಯಾಗುವ ಲಕ್ಷಣವಿದೆ. ಮಳೆಯ ವೇಳೆ ಆದಷ್ಟು ಮನೆಯಲ್ಲಿಯೇ ಇದ್ದು ಅನಾಹುತಗಳನ್ನು ತಪ್ಪಿಸಿಕೊಳ್ಳುವುದೇ ಉತ್ತಮ.

ಮಳೆ ಅನಾಹುತ ತಡೆಯಲು ಬಿಬಿಎಂಪಿ ಎಷ್ಟೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರೂ ಪ್ರತೀ ಮಳೆಗೂ ಜನರ ಸಂಕಷ್ಟ ತಪ್ಪಿದ್ದಲ್ಲ. ಇದೇ ರೀತಿ ಎರಡು ದಿನ ಮತ್ತೆ ಮಳೆ ಮುಂದುವರಿದರೆ ಜನರ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments