ಬೆಂಗಳೂರಿನಲ್ಲಿ ಇಂದೂ ಮಳೆ: ದಟ್ಟ ಮೋಡ ಕವಿದ ವಾತಾವರಣ, ಬೇಗನೇ ಮನೆ ಸೇರಿಕೊಳ್ಳಿ

Krishnaveni K
ಭಾನುವಾರ, 6 ಅಕ್ಟೋಬರ್ 2024 (17:51 IST)
ಬೆಂಗಳೂರು: ನಿನ್ನೆ ರಾತ್ರಿಯಿಡೀ ಮಳೆ ಸುರಿದು ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ಇಂದೂ ಬೆಂಗಳೂರಿಗರು ಮತ್ತೆ ಮಳೆಗೆ ಸಜ್ಜಾಗಬೇಕಿದೆ. ಇದೀಗ ದಟ್ಟ ಮೋಡ ಕವಿದ ವಾತಾವರಣವಿದ್ದು ಇಂದೂ ಸಂಜೆ ಮಳೆಯಾಗಲಿದೆ.

ಹವಾಮಾನ ಇಲಾಖೆ ಈಗಾಗಲೇ ಮುಂದಿನ ಎರಡು ದಿನಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿತ್ತು. ಹೀಗಾಗಿ ಇಂದೂ ಮಳೆಯಾಗಲಿದೆ. ನಿನ್ನೆ ಮಳೆಯಿಂದಾಗಿ ಕೆಲವು ಮನೆಗಳಿಗೆ ನೀರು ನುಗ್ಗಿದ್ದರೆ, ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
 
ಇದರ ಜೊತೆಗೆ ಕೆಲವು ಕಡೆ ಕಂಪೌಂಡ್ ಕುಸಿತು, ರಸ್ತೆ ಕುಸಿದು ಅನಾಹುತಗಳಾಗಿವೆ. ಒಂದು ಮಳೆಗೇ ಈ ಪರಿಸ್ಥಿತಿಯಾದರೆ ಹೇಗೆ ಎಂದು ಜನ ಹಿಡಿಶಾಪ ಹಾಕುತ್ತಿದ್ದಾರೆ. ಇದರ ನಡುವೆ ಇಂದೂ ಮಳೆಯಾಗುವ ಲಕ್ಷಣವಿದೆ. ಮಳೆಯ ವೇಳೆ ಆದಷ್ಟು ಮನೆಯಲ್ಲಿಯೇ ಇದ್ದು ಅನಾಹುತಗಳನ್ನು ತಪ್ಪಿಸಿಕೊಳ್ಳುವುದೇ ಉತ್ತಮ.

ಮಳೆ ಅನಾಹುತ ತಡೆಯಲು ಬಿಬಿಎಂಪಿ ಎಷ್ಟೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರೂ ಪ್ರತೀ ಮಳೆಗೂ ಜನರ ಸಂಕಷ್ಟ ತಪ್ಪಿದ್ದಲ್ಲ. ಇದೇ ರೀತಿ ಎರಡು ದಿನ ಮತ್ತೆ ಮಳೆ ಮುಂದುವರಿದರೆ ಜನರ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ
Show comments