Webdunia - Bharat's app for daily news and videos

Install App

ಮೋದಿಗೆ ರಸ್ತೆ ವೀಕ್ಷಿಸಲು ಕರೆದ ಬೆಂಗಳೂರು ಜನ

Webdunia
ಭಾನುವಾರ, 5 ಡಿಸೆಂಬರ್ 2021 (17:02 IST)
ಡಿಸೆಂಬರ್ 6 ರಂದು ಬೆಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿರುವ ಡಾ. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡವನ್ನು ಮೋದಿ ಉದ್ಘಾಟಿಸಲಿರುವ ಕಾರಣ ಹದಗೆಟ್ಟ ರಸ್ತೆಯನ್ನು ದುರಸ್ತಿ ಮಾಡಲಾಗಿದೆ. ಇನ್ನು, ಬೆಂಗಳೂರಿನ ರಸ್ತೆಗಳ ಬಗ್ಗೆ ಆಮ್ ಆದ್ಮಿ ಪಕ್ಷದ ಅಶೋಕ್ ಮೃತ್ಯುಂಜಯ ಮಾತನಾಡಿ, ಮಹದೇವಪುರದ ಬಹುತೇಕ ಎಲ್ಲಾ ರಸ್ತೆಗಳು ಸಂಚಾರಕ್ಕೆ ಯೋಗ್ಯವಾಗಿಲ್ಲ ಎಂದು ಟೀಕಿಸಿದ್ದಾರೆ.ನಾವು ಕಾಣುವುದು ಮಣ್ಣಿನಿಂದ ಆವೃತವಾಗಿರುವ ಅಥವಾ ಗುಂಡಿಗಳಿಂದ ತುಂಬಿದ ರಸ್ತೆ. ರಸ್ತೆಗಳು ಧೂಳಿನಿಂದ ಕೂಡಿರುವುದರಿಂದ ದ್ವಿಚಕ್ರ ವಾಹನ ಸವಾರಿ ಇನ್ನಷ್ಟು ಹದಗೆಡುತ್ತಿದೆ' ಎಂದು ಹೇಳಿದರು. "ವಿಐಪಿಗಳು ಮಾತ್ರ ಸುರಕ್ಷಿತವಾಗಿ ಸವಾರಿ ಮಾಡಬೇಕೆಂದು ಬಿಬಿಎಂಪಿ ಬಯಸುತ್ತಿರುವಂತೆ ತೋರುತ್ತಿದೆ" ಎಂದೂ ಆರೋಪಿಸಿದರು. ಕೆಲವು ಟ್ವಿಟ್ಟರ್ ಬಳಕೆದಾರರು ತಮ್ಮ ಪ್ರದೇಶಗಳಿಗೆ ಭೇಟಿ ನೀಡುವಂತೆ ಪ್ರಧಾನಿಯನ್ನು ಆಹ್ವಾನಿಸಿದರು.
 
"ಬೆಂಗಳೂರು ರಸ್ತೆಗಳು ಅತ್ಯಂತ ದಯನೀಯ ಪರಿಸ್ಥಿತಿಯಲ್ಲಿವೆ. ರಸ್ತೆಯ ಮೂಲಕ ನಿಮ್ಮ ನಿಗದಿತ ಪ್ರಯಾಣ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೊಸ ರೂಪ ನೀಡಿದೆ. ಈ ಹಿನ್ನೆಲೆ, ಇನ್ನು ಕೆಲವು ಪ್ರದೇಶಗಳಿಗೆ ರಸ್ತೆಯ ಮೂಲಕ ಪ್ರಯಾಣಿಸಲು ವಿನಂತಿಸುತ್ತೇನೆ. ಇದರಿಂದ ನಗರವು ಉತ್ತಮ ರಸ್ತೆಗಳನ್ನು ಪಡೆಯುತ್ತದೆ" ಎಂದು ದೀಪಕ್ ಕೃಷ್ಣಪ್ಪ ಎಂಬುವವರು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments