Webdunia - Bharat's app for daily news and videos

Install App

ಬೆಂಗಳೂರಿಗರಿಗೆ ವಾರಕ್ಕೊಂದು ಬೆಲೆ ಏರಿಕೆ ಬರೆ: ಈ ವಾರ ಕಾವೇರಿ ನೀರಿನ ಸರದಿ

Krishnaveni K
ಸೋಮವಾರ, 17 ಫೆಬ್ರವರಿ 2025 (12:53 IST)
ಬೆಂಗಳೂರು: ರಾಜ್ಯ ರಾಜಧಾನಿ ನಾಗರಿಕರಿಗೆ ವಾರಕ್ಕೊಂದು ಬೆಲೆ ಏರಿಕೆ ಬಿಸಿ ಎಂಬಂತಾಗಿದೆ. ಈ ವಾರ ಕಾವೇರಿ ನೀರಿನ ಸರದಿ ಎಂದು ವರದಿಯಾಗಿದೆ.

ಕಳೆದ ವಾರ ಬೆಂಗಳೂರು ಮೆಟ್ರೊ ಪ್ರಯಾಣ ದರ ದುಪ್ಪಟ್ಟಾಗಿತ್ತು. ಇದರ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಮೆಟ್ರೊ ಪ್ರಯಾಣ ದುಬಾರಿಯಾಗಿರುವುದರಿಂದ ಜನ ಈಗ ಬಸ್ ಅಥವಾ ಖಾಸಗಿ ವಾಹನಗಳನ್ನು ಆಶ್ರಯಿಸುತ್ತಿದ್ದಾರೆ.

ಇದಕ್ಕೆ ಮೊದಲು ಬಸ್ ಪ್ರಯಾಣ ದರವನ್ನು ರಾಜ್ಯ ಸರ್ಕಾರ ಹೆಚ್ಚು ಮಾಡಿತ್ತು. ಕೆಎಸ್ ಆರ್ ಟಿಸಿ ಸೇರಿದಂತೆ ಎಲ್ಲಾ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡಿತ್ತು. ಇದೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಅದರ ಬೆನ್ನಲ್ಲೇ ಈಗ ಕಾವೇರಿ ನೀರಿನ ದರ ಹೆಚ್ಚಳದ ಬಗ್ಗೆ ಸುದ್ದಿಯಾಗಿದೆ. ಕಳೆದ ಕೆಲವು ಸಮಯದಿಂದಲೂ ನೀರಿನ ದರ ಏರಿಕೆ ಬಗ್ಗೆ ಪ್ರಸ್ತಾಪವಿತ್ತು. ಇದೀಗ ಈ ವಾರದಿಂದಲೇ ಕಾವೇರಿ ನೀರಿನ ದರ ಏರಿಕೆ ಬಗ್ಗೆ ಘೋಷಣೆಯಾಗಲಿದೆ ಎಂದು ಸುದ್ದಿಯಾಗಿದೆ.  ಮುಂದಿನ ಗುರುವಾರ ಕ್ಯಾಬಿನೆಟ್ ಸಭೆ ನಡೆಯಲಿದ್ದು ಸಭೆಯಲ್ಲಿ ಕಾವೇರಿ ನೀರಿನ ದರ ಏರಿಕೆ ಬಗ್ಗೆ ಚರ್ಚೆಯಾಗಲಿದೆ. ಒಂದು ವೇಳೆ ಸಭೆಯಲ್ಲಿ ಒಪ್ಪಿಗೆ ಸಿಕ್ಕರೆ ಶೀಘ್ರದಲ್ಲೇ ಬೆಂಗಳೂರಿಗರಿಗೆ ಕಾವೇರಿ ನೀರಿದ ದರ ಏರಿಕೆ ಬರೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments