Webdunia - Bharat's app for daily news and videos

Install App

ಬೆಂಗಳೂರಿಗರಿಗೆ ವಾರಕ್ಕೊಂದು ಬೆಲೆ ಏರಿಕೆ ಬರೆ: ಈ ವಾರ ಕಾವೇರಿ ನೀರಿನ ಸರದಿ

Krishnaveni K
ಸೋಮವಾರ, 17 ಫೆಬ್ರವರಿ 2025 (12:53 IST)
ಬೆಂಗಳೂರು: ರಾಜ್ಯ ರಾಜಧಾನಿ ನಾಗರಿಕರಿಗೆ ವಾರಕ್ಕೊಂದು ಬೆಲೆ ಏರಿಕೆ ಬಿಸಿ ಎಂಬಂತಾಗಿದೆ. ಈ ವಾರ ಕಾವೇರಿ ನೀರಿನ ಸರದಿ ಎಂದು ವರದಿಯಾಗಿದೆ.

ಕಳೆದ ವಾರ ಬೆಂಗಳೂರು ಮೆಟ್ರೊ ಪ್ರಯಾಣ ದರ ದುಪ್ಪಟ್ಟಾಗಿತ್ತು. ಇದರ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಮೆಟ್ರೊ ಪ್ರಯಾಣ ದುಬಾರಿಯಾಗಿರುವುದರಿಂದ ಜನ ಈಗ ಬಸ್ ಅಥವಾ ಖಾಸಗಿ ವಾಹನಗಳನ್ನು ಆಶ್ರಯಿಸುತ್ತಿದ್ದಾರೆ.

ಇದಕ್ಕೆ ಮೊದಲು ಬಸ್ ಪ್ರಯಾಣ ದರವನ್ನು ರಾಜ್ಯ ಸರ್ಕಾರ ಹೆಚ್ಚು ಮಾಡಿತ್ತು. ಕೆಎಸ್ ಆರ್ ಟಿಸಿ ಸೇರಿದಂತೆ ಎಲ್ಲಾ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡಿತ್ತು. ಇದೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಅದರ ಬೆನ್ನಲ್ಲೇ ಈಗ ಕಾವೇರಿ ನೀರಿನ ದರ ಹೆಚ್ಚಳದ ಬಗ್ಗೆ ಸುದ್ದಿಯಾಗಿದೆ. ಕಳೆದ ಕೆಲವು ಸಮಯದಿಂದಲೂ ನೀರಿನ ದರ ಏರಿಕೆ ಬಗ್ಗೆ ಪ್ರಸ್ತಾಪವಿತ್ತು. ಇದೀಗ ಈ ವಾರದಿಂದಲೇ ಕಾವೇರಿ ನೀರಿನ ದರ ಏರಿಕೆ ಬಗ್ಗೆ ಘೋಷಣೆಯಾಗಲಿದೆ ಎಂದು ಸುದ್ದಿಯಾಗಿದೆ.  ಮುಂದಿನ ಗುರುವಾರ ಕ್ಯಾಬಿನೆಟ್ ಸಭೆ ನಡೆಯಲಿದ್ದು ಸಭೆಯಲ್ಲಿ ಕಾವೇರಿ ನೀರಿನ ದರ ಏರಿಕೆ ಬಗ್ಗೆ ಚರ್ಚೆಯಾಗಲಿದೆ. ಒಂದು ವೇಳೆ ಸಭೆಯಲ್ಲಿ ಒಪ್ಪಿಗೆ ಸಿಕ್ಕರೆ ಶೀಘ್ರದಲ್ಲೇ ಬೆಂಗಳೂರಿಗರಿಗೆ ಕಾವೇರಿ ನೀರಿದ ದರ ಏರಿಕೆ ಬರೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಮತ್ತೆ ಏರಿಕೆ, ಎಷ್ಟಾಗಿದೆ ನೋಡಿ

Pehalgam: ಪಹಲ್ಗಾಮ್ ನಲ್ಲಿ ರಕ್ತಪಾತ ಮಾಡಿದ ಉಗ್ರರು ಈಗ ಎಲ್ಲಿದ್ದಾರೆ ಎಂಬುದು ಪತ್ತೆ

Viral Video: ಈ ಮಕ್ಕಳಿಗೆ ಯೋಧರ ಮೇಲೆ ಅದೆಂಥಾ ಗೌರವ ನೀವೇ ವಿಡಿಯೋ ನೋಡಿ

ಪಹಲ್ಗಾಮ್ ದಾಳಿಗೆ ಮುಸ್ಲಿಮ್ ಹಣೆಪಟ್ಟಿ ಕಟ್ಟುವ ಯತ್ನ ಎಂದ ಪ್ರಿಯಾಂಕ್ ಖರ್ಗೆಗೆ ನೆಟ್ಟಿಗರಿಂದ ಫೋಟೋ ಸಹಿತ ತಿರುಗೇಟು

Video: ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರ ಮನೆಗಳು ಉಡೀಸ್

ಮುಂದಿನ ಸುದ್ದಿ
Show comments