Webdunia - Bharat's app for daily news and videos

Install App

4 ವರ್ಷದಲ್ಲಿ 2 ನೇ ಸಲ ಕಳ್ಳತನ : ಬ್ಯಾಂಕಿಗೆ ಕನ್ನ ಹಾಕಿ ಕೋಟಿ ಕೋಟಿ ಲೂಟಿ

Webdunia
ಬುಧವಾರ, 25 ಸೆಪ್ಟಂಬರ್ 2019 (18:51 IST)
ನಾಲ್ಕು ವರ್ಷದ ಹಿಂದೆ ಬ್ಯಾಂಕ್ ವೊಂದಕ್ಕೆ ಕನ್ನ ಹಾಕಿ ಕೋಟಿ ಕೋಟಿ ಲೂಟಿ ಮಾಡಿದ್ದ ಘಟನೆ ಮಾಸುವ ಮುನ್ನವೇ ಮತ್ತೆ ಅದೇ ಬ್ಯಾಂಕಿನಲ್ಲಿ ಭಾರೀ ಪ್ರಮಾಣದ ಕಳ್ಳತನ ನಡೆದಿದೆ.

ಹೊನ್ನಾಳಿ - ಶಿವಮೊಗ್ಗ ರಸ್ತೆಯ ಅರಕೆರೆಯ ಕರ್ನಾಟಕ  ಬ್ಯಾಂಕ್  ಶಾಖೆಗೆ ಕನ್ನ ಹಾಕಿದ್ದ ಕಳ್ಳರು, ಇದೀಗ ಮತ್ತೆ ಅದೇ ಮಾದರಿಯಲ್ಲಿ ಗೋಡೆ ಕೊರೆದು ದರೋಡೆ ಮಾಡಿದ್ದಾರೆ. ಬ್ಯಾಂಕ್ ಹಿಂಬಂದಿಯ ಗೋಡೆ  ಕೊರೆದು ಚಿನ್ನಾಭರಣ ಸಹಿತ  ನಗದು ಹಣವನ್ನು ದೋಚಿದ್ದಾರೆ.

ಕಳೆದ ನಾಲ್ಕು ವರ್ಷದ ಹಿಂದೆ ದಾವಣಗೆರೆ ಜಿಲ್ಲೆ ಜನರನ್ನೇ ಈ ಪ್ರಕರಣ ಬೆಚ್ಚಿ ಬೀಳಿಸಿತ್ತು. ಇದೀಗ ಮತ್ತೆ ದರೋಡೆಕೋರರು ಅದೇ ಬ್ಯಾಂಕ್ ನ ಗೋಡೆ ಕೊರೆದು ದರೋಡೆ ಮಾಡಿದ್ದಾರೆ. ಈ ಹಿಂದೆ 4 ಕೋಟಿಯ ಚಿನ್ನಾಭರಣ, ನಗದು ಕಳ್ಳತನವಾಗಿತ್ತು. ಆ ದುರಂತ  ಇನ್ನು ಮಾಸುವ ಮುನ್ನವೇ  ಮತ್ತೇ ಕಳ್ಳರು ಅದೇ ಬ್ಯಾಂಕಿಗೆ ಕನ್ನ ಹಾಕಿದ್ದಾರೆ.  

ಸ್ಥಳಕ್ಕೆ ಹೊನ್ನಾಳಿ ಪೊಲೀಸರು ಸೇರಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಕಳ್ಳತನ ಬೇಧಿಸಲು 2 ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಿ ಮಾಡಿದ ಭಾಷಣದಲ್ಲಿ Kalladaka Prabhakar Bhat ಮೇಲೆ ದಾಖಲಾಯಿತು ಪ್ರಕರಣ

Coastal Karnataka Communal Case:ಹೊಸ ವಿಶೇಷ ಪಡೆ ರಚಿಸಿದ ಸರ್ಕಾರ

Communal Case, ಕರಾವಳಿ ಪರಿಸ್ಥಿತಿಗೆ ರಾಜ್ಯ ಸರ್ಕಾರವೇ ಹೊಣೆ: ಬಿವೈ ವಿಜಯೇಂದ್ರ

ಸೇನಾ ಶಿಬಿರದ ಮೇಲೆ ಭೂಕುಸಿತ: ಮೂವರ ಮೃತದೇಹ ಹೊರಕ್ಕೆ, ಹಲವರು ಸಿಲುಕಿರುವ ಶಂಕೆ

ಕೊಲೆ ಪ್ರಕರಣದ ಆರೋಪಿಗಳಿಗೆ ಮತೀಯ ಸಂಘನೆಯ ನಂಟು: ದಕ ಜಿಲ್ಲಾ ಎಸ್ಪಿ ಕೆ ಅರುಣ್‌

ಮುಂದಿನ ಸುದ್ದಿ
Show comments