Webdunia - Bharat's app for daily news and videos

Install App

ಬ್ಯಾಂಕ್ ಕಳ್ಳತನಕ್ಕೆ ಬಂದ್ರು: ಬೀರು ಒಡೆಯದ ಕಾರಣ ವಾಪಸ್ ಆದ ಕಳ್ಳರು

Webdunia
ಬುಧವಾರ, 18 ಜುಲೈ 2018 (18:21 IST)
ಗ್ಯಾಸ್ ಕಟ್ಟರ್ ಮೂಲಕ ಕಿಟಕಿ ಬೇರ್ಪಡಿಸಿ ಬ್ಯಾಂಕಿಗೆ ಕನ್ನ ಹಾಕಿ ಕಳ್ಳತನಕ್ಕೆ ವಿಫಲ ನಡೆಸಿರುವ ಘಟನೆ ನಡೆದಿದೆ. ಬ್ಯಾಂಕಿನಲ್ಲಿದ್ದ ಬೀರು ಒಡೆಯಲು ವಿಫಲವಾಗಿದ್ದರಿಂದ ಕಳ್ಳರು ವಾಪಸ್ ಆಗಿದ್ದಾರೆ. ಕಳ್ಳತನಕ್ಕೆ ಯತ್ನ ನಡೆಸಿದ್ದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಹಾವೇರಿಯಲ್ಲಿ ಬ್ಯಾಂಕ್ ಕಳುವಿಗೆ ವಿಫಲ ಯತ್ನ ನಡೆದಿದೆ. ಹಾವೇರಿ ವಿದ್ಯಾನಗರದ ಕೆವಿಜಿ ಬ್ಯಾಂಕ್ ನಲ್ಲಿ ಇಂದು ನಸುಕಿನಲ್ಲಿ ಕಳವಿನ ಯತ್ನ ನಡೆದಿದ್ದು, ಕಿಟಕಿಯನ್ನು ಗ್ಯಾಸ್ ಕಟ್ಟರ್ ಮೂಲಕ ಬೇರ್ಪಡಿಸಿ ಕಳ್ಳರು ಒಳ ಬಂದಿದ್ದಾರೆ. ಬೀರು ಒಡೆಯಲು ನಡೆಸಿದ ಪ್ರಯತ್ನವು ವಿಫಲವಾಗಿದೆ. ಹೀಗಾಗಿ ಕಳ್ಳರು ಬರೀಗೈಲಿ ವಾಪಸಾಗಿದ್ದಾರೆ.  

ಸ್ಥಳಕ್ಕೆ ಹಾವೇರಿ ಎಸ್ಪಿ ಪರಶುರಾಮ್ ಭೆಟಿ ನೀಡಿದರು.  ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದಾರೆ.  ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments