Webdunia - Bharat's app for daily news and videos

Install App

ನಾಪತ್ತೆಯಾಗಿದ್ದ ಹಣದ ವಾಹನ ಪತ್ತೆ: 92 ಲಕ್ಷದೊಂದಿಗೆ ವಾಹನ ಚಾಲಕ ಪರಾರಿ

Webdunia
ಗುರುವಾರ, 24 ನವೆಂಬರ್ 2016 (11:31 IST)
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿರುವ ಕೆಜಿ ರಸ್ತೆ ಬಳಿ ಕೋಟಿಗಟ್ಟಲೆ ಹೊಸ ನೋಟಿನ ಹಣ ಸಾಗಿಸುತ್ತಿದ್ದ ವಾಹನ ನಿನ್ನೆ ನಾಪತ್ತೆಯಾಗಿತ್ತು. ಇಂದು ಬೆಳಿಗ್ಗೆ ವಾಹನ ಪತ್ತೆಯಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.
 
ವಾಹನ ಚಾಲಕ ರೋಮ್ನಿಕ್ ರಾಯ್ ನಾಪತ್ತೆಯಾಗಿದ್ದು 92 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದಾನೆ. ಇಂದು ಬೆಳಿಗ್ಗೆ ಪತ್ತೆಯಾದ ವಾಹನದಲ್ಲಿ ಕೇವಲ 42 ಲಕ್ಷ ರೂಪಾಯಿಗಳು ಕಂಡು ಬಂದಿವೆ.
 
ಚಾಲಕ ರಾಯ್ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಯ ಬಂಧನಕ್ಕೆ ಜಾಲ ಬೀಸಿದ್ದು ಶೀಘ್ರದಲ್ಲಿಯೇ ಆರೋಪಿಯನ್ನು ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಗನ್‌ಮ್ಯಾನ್‌ಗೆ ದಾರಿ ತಪ್ಪಿಸಿದ ವಾಹನ ಚಾಲಕ ಹಣವಿರುವ ವಾಹನದೊಂದಿಗೆ ನಾಪತ್ತೆಯಾಗಿದ್ದಾನೆ. ಗನ್‌ಮ್ಯಾನ್‌ಗೆ ಯೂ-ಟರ್ನ್ ತೆಗೆದುಕೊಂಡು ಬರುವುದಾಗಿ ಹೇಳಿದ ವಾಹನ ಚಾಲಕ ವಾಹನದೊಂದಿಗೆ ಕಾಣೆಯಾಗಿದ್ದಾನೆ ಎನ್ನಲಾಗಿದೆ
 
ಲೋಗಿ ಕ್ಯಾಶ್ ಸೆಕ್ಯೂರಿಟಿ ಏಜೆನ್ಸಿ ಎಟಿಎಂಗಳಿಗೆ ಹಣ ತುಂಬುವ ಹೊಣೆ ಹೊತ್ತುಕೊಂಡಿತ್ತು. ವಾಹನ ಚಾಲಕ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಎಂದು ಏಜೆನ್ಸಿ ಅಧಿಕಾರಿಗಳು ತಿಳಿಸಿದ್ದಾರೆ.
 
ವಾಹನದಲ್ಲಿ 1.37 ಕೋಟಿ ಹಣವಿತ್ತು. ಬ್ಯಾಂಕ್ ಆಫ್ ಇಂಡಿಯಾದ ಎಟಿಎಂಗಳಿಗೆ ಹಣ ತುಂಬಲು ವಾಹನದಲ್ಲಿ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.
 
ಘಟನಾ ಸ್ಥಳಕ್ಕೆ ಚಿಕ್ಕಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರದ ಎಲ್ಲಾ ಕಡೆ ವಾಹನಗಳ ತಪಾಸಣೆ ನಡೆಸುವಂತೆ ಹಿರಿಯ ಅಧಿಕಾರಿಗಳು ಆದೇಶ ನೀಡಿದ್ದಾರೆ ಎನ್ನಲಾಗಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments