Publish Date: Sat, 26 Feb 2022 (10:15 IST)
Updated Date: Sat, 26 Feb 2022 (10:20 IST)
ರಾಮನಗರ : ಹೊಟ್ಟೆ ಹಾಗೂ ತಲೆಗೆ ಡ್ರ್ಯಾಗನ್ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಗಂಟಪ್ಪ ಕೊಲೆಯಾದ ದುರ್ದೈವಿ. ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿಯಾಗಿರುವ ಇವರನ್ನು ಭೈರವನದೊಡ್ಡಿ ಸಮೀಪ ಇರುವ ಅವರದ್ದೇ ತೋಟದ ಬೈಕ್ ಸರ್ವಿಸ್ ಸ್ಟೇಷನ್ ಮನೆಯಲ್ಲಿ ಕೊಲೆ ಮಾಡಲಾಗಿದೆ.
ಈ ಘಟನೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಸದ್ಯ ಕೊಲೆಯಾದ ಗಂಟಪ್ಪ ಅವರ ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ.