ಹಳೇ ದ್ವೇಷಕ್ಕೆ ಯುವಕನ ಬರ್ಬರ ಹತ್ಯೆ: ಗುಂಡು ಹಾರಿಸಿ ಆರೋಪಿಗಳ ಬಂಧನ

Sampriya
ಶನಿವಾರ, 12 ಅಕ್ಟೋಬರ್ 2024 (15:05 IST)
ಹುಬ್ಬಳ್ಳಿ: ಹಣಕಾಸಿನ ವ್ಯವಹಾರ ಮತ್ತು ಹಳೇ ದ್ವೇಷದ ಹಿನ್ನೆಲೆ ಎಂಟು ಮಂದಿಯ ಗುಂಪೊಂದು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಗೋಪನಕೊಪ್ಪದ ವೃತ್ತದಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಗೋಪನಕೊಪ್ಪದ ಶಿವರಾಜ(23) ಎಂದು ಗುರುತಿಸಲಾಗಿದೆ.

ಮಚ್ಚಿನಿಂದ ಐದು ಬಾರಿ ತಲೆ ಭಾಗಕ್ಕೆ ಹಾಗೂ 30ಕ್ಕೂ ಹೆಚ್ಚು ಕಡೆ ಚಾಕುವಿನಿಂದ ಇರಿದ ಗುರುತು ಮೃತ ದೇಹದ ಮೇಲೆ ಪತ್ತೆಯಾಗಿದೆ. ಕಿಮ್ಸ್ ಶವಾಗಾರದ ಎದುರು ಶಿವರಾಜ ಅವರ ಸಂಬಂಧಿಗಳ ಆಕ್ರಂದನ ಮುಗಿಲು ಮುಗಿಲುಮುಟ್ಟಿದ್ದು, ಕೊಲೆಗಡುಗರಿಕೆ ಗಲ್ಲು ಶಿಕ್ಷೆ ನೀಡಿ ಎಂದು ಆಗ್ರಹಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಕಿರಣ ಜಟ್ಟನಪ್ಪನವರ ಮತ್ತು ಸುದೀಪ ರಾಯಾಪುರ ಅವರನ್ನು ಅಶೋಕನಗರ ಠಾಣೆ ಪೊಲೀಸರು ಶುಕ್ರವಾರ ರಾತ್ರಿಯೇ ಬಂಧಿಸಿದ್ದರು.

ಈ ಸಂಬಂಧ ಪೊಲೀಸ್ ಕಮಿಷನರ್ ಎನ್‌ ಶಶಿಕುಮಾರ್ ಪ್ರತಿಕ್ರಿಯಿಸಿ, ಮೂವರು ಆರೋಪಿಗಳಲ್ಲಿ ಇಬ್ಬರು, ಮತ್ತಷ್ಟು ಆರೋಪಿಗಳ ಮಾಹಿತಿ ನೀಡುವುದಾಗಿ ಹೇಳಿದ್ದರು. ಅವರ ಹೇಳಿಕೆಯಂತೆ ಹಳೇಹುಬ್ಬಳ್ಳಿ ಕಡೆಗೆ ಕರೆದುಕೊಂಡು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

ಈ ವೇಳೆ ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆದರೂ ಅವರು ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾದಾಗ, ಕಾಲಿಗೆ ಗುಂಡು ಹೊಡೆಯಲಾಗಿದೆ. ಘಟನೆಯಲ್ಲಿ ಸಿಬ್ಬಂದಿ ಪರಶುರಾಮ, ಶಂಭು, ಮಂಜುನಾಥ ಮತ್ತು ಸಾತಣ್ಣವರ ಅವರಿಗೂ ಗಾಯಗೊಂಡಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments