Webdunia - Bharat's app for daily news and videos

Install App

16 ಬಾರಿ ಚುಚ್ಚಿ ಯುವತಿಯ ಬರ್ಬರ ಹತ್ಯೆ

Webdunia
ಗುರುವಾರ, 2 ಮಾರ್ಚ್ 2023 (14:15 IST)
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆಯಾಗಿದೆ. ಕೆಲ ವರ್ಷಗಳಿಂದ ಪ್ರೀತಿಸ್ತಿದ್ದ ಪ್ರಿಯತಮೆಯನ್ನೇ ಪಾಗಲ್ ಪ್ರೇಮಿಯೊಬ್ಬ 16 ಬಾರಿ ಚುಚ್ಚಿ ಚುಚ್ಚಿ ಕೊಲೆ ಮಾಡಿರೋ ಘಟನೆ ಮುರಗೇಶ್ ಪಾಳ್ಯದ HAL ರಸ್ತೆಯಲ್ಲಿ ನಡೆದಿದೆ. ಮೃತಳನ್ನು ಲೀಲಾ ಪವಿತ್ರಾ ಎಂದು ಗುರುತಿಸಲಾಗಿದ್ದು, ಈಕೆಯನ್ನು ಪಾಗಲ್ ಪ್ರೇಮಿ ದಿನಕರ್ ಕೊಲೆ ಮಾಡಿದ್ದಾನೆ. ಆಂಧ್ರಪ್ರದೇಶ ಮೂಲದ ಲೀಲಾ ಪವಿತ್ರಾ, ಒಮೆಗಾ ಎನ್ನುವ ಮೆಡಿಸನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಲೀಲಾ ಪವಿತ್ರಾ ಹಾಗೂ ದಿನಕರ್ ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ರು. ಆದರೆ ಇತ್ತೀಚೆಗೆ ಲೀಲಾ, ದಿನಕರ್‌ನನ್ನು ಅವಾಯ್ಡ್ ಮಾಡುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಕೆಲಸ ಮುಗಿಸಿ ಲೀಲಾಳನ್ನು ಹತ್ಯೆಗೈದಿದ್ದಾನೆ. ಲೀಲಾ ಕೆಲಸ ಮುಗಿಸಿ ಹೊರಗಡೆ ಬರೋದನ್ನೇ ಕಾಯ್ತಿದ್ದ ದಿನಕರ್, ಮಾತನಾಡಿಸುವ ನೆಪದಲ್ಲಿ ಆಕೆಯ ಎದೆ, ಹೊಟ್ಟೆ, ಕುತ್ತಿಗೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದಾನೆ. ಲೀಲಾ ಪವಿತ್ರಾ ಹಾಗೂ ದಿನಕರ್ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು ಎನ್ನಲಾಗಿದೆ. ಯುವತಿಯ ಮೃತದೇಹ ಕೊಂಡೊಯ್ದ ಮೇಲೂ ಅಲ್ಲೇ ಇದ್ದ ದಿನಕರ್​​​​ನನ್ನು ಪೊಲೀಸರು ಕರೆದೊಯ್ದಿದ್ದಾರೆ. ಸದ್ಯ ಘಟನೆ ಸಂಬಂಧ ಜೀವನ್ ಭೀಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

Air India Plane Crash: ಅಹಮ್ಮದಾಬಾದ್ ನಲ್ಲಿ 242 ಜನರಿದ್ದ ಏರ್ ಇಂಡಿಯಾ ವಿಮಾನ ಭಾರೀ ಅಪಘಾತ video

ಮುಂದಿನ ಸುದ್ದಿ
Show comments