Select Your Language

Notifications

webdunia
webdunia
webdunia
webdunia

ಇಟ್ಟಿಗೆಯಿಂದ ತಲೆ ಚಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಇಟ್ಟಿಗೆಯಿಂದ ತಲೆ ಚಚ್ಚಿ ವ್ಯಕ್ತಿಯ ಬರ್ಬರ ಹತ್ಯೆ
bangalore , ಶುಕ್ರವಾರ, 25 ಫೆಬ್ರವರಿ 2022 (17:44 IST)
ಕಾಮಾಕ್ಷಿಪಾಳ್ಯದ ಬಸ್ ನಿಲ್ದಾಣ ಸಮೀಪದ ಫುಟ್‍ಪಾತ್‍ನಲ್ಲಿ ದುಷ್ಕರ್ಮಿಗಳು ತಡರಾತ್ರಿ ವ್ಯಕ್ತಿಯ ತಲೆಗೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
 
ಇಂದು ಮುಂಜಾನೆ ಈ ಮಾರ್ಗದಲ್ಲಿ ಹೋಗುತ್ತಿದ್ದ ಸಾರ್ವಜನಿಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಕೊಲೆಯಾದ ವ್ಯಕ್ತಿ ಯಾರೆಂಬುದು ಗೊತ್ತಾಗಿಲ್ಲ. ನಂತರ ಆ ವ್ಯಕ್ತಿಯ ಜೇಬನ್ನು ಪರಿಶೀಲಿಸಿದಾಗ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆ ಆಧಾರ್‍ಕಾರ್ಡ್‍ನಲ್ಲಿ ಸತೀಶ (46) ವೃಷಭಾವತಿನಗರ ಎಂಬ ವಿಳಾಸ ಇದೆ.
 
ಪೊಲೀಸರು ತಕ್ಷಣ ಆ ವಿಳಾಸಕ್ಕೆ ಹೋಗಿ ವಿಚಾರಿಸಿದಾಗ ಆ ಸ್ಥಳದಲ್ಲಿ ಸತೀಶ್ ವಾಸಿಸುತ್ತಿದ್ದರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಕ್ಕಪಕ್ಕದವರನ್ನು ವಿಚಾರಿಸಿದಾಗ ಸತೀಶ್ ಎಂಬುವವರು ತಮಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
 
ಜೇಬಿನಲ್ಲಿ ದೊರೆತ ಆಧಾರ್ ಕಾರ್ಡ್ ಕೊಲೆಯಾದ ವ್ಯಕ್ತಿಯದ್ದೇ ಅಥವಾ ಬೇರೆಯವರ ಆಧಾರ್‍ಕಾರ್ಡ್‍ಅನ್ನು ಜೇಬಿನಲ್ಲಿ ಇಟ್ಟುಕೊಂಡಿದ್ದರೇ ಎಂಬುದನ್ನುಪೊಲೀಸರು ಪತ್ತೆಹಚ್ಚುತ್ತಿದ್ದಾರೆ. ಸ್ಥಳಕ್ಕೆ ಇನ್ಸ್‍ಪೆಕ್ಟರ್ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವ್ಯಕ್ತಿಯನ್ನು ಯಾರು, ಏತಕ್ಕಾಗಿ ಕೊಲೆ ಮಾಡಿದ್ದಾರೆಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರವಾಸಿಗರಿಗೆ ಸಿಹಿ ಸುದ್ದಿ