Webdunia - Bharat's app for daily news and videos

Install App

ಬಜೆಟ್‌ನಲ್ಲಿ ರಾಜ್ಯಕ್ಕೆ ಬರೀ ಚೊಂಬು: ಸಿಎಂ ಸಿದ್ದರಾಮಯ್ಯ

Sampriya
ಶನಿವಾರ, 1 ಫೆಬ್ರವರಿ 2025 (17:05 IST)
ಮೈಸೂರು: ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕ ಹಾಗೂ ದೇಶದ ಹಿತದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೂರದೃಷ್ಟಿ ಇಲ್ಲದ ಬಜೆಟ್. ಈ ಮೂಲಕ ಮೋದಿ ಸರ್ಕಾರ ಕರ್ನಾಟಕಕ್ಕೆ ಚೆಂಬು ಕೊಡುವುದನ್ನು ಮುಂದುವರಿಸಿದೆ ಎಂದು ಟೀಕೆ ಮಾಡಿದರು.

ಬಜೆಟ್ ಪೂರ್ವಭಾವಿ ಚರ್ಚೆ ವೇಳೆ ಕರ್ನಾಟಕ ಸರ್ಕಾರ ಹಲವು ಬೇಡಿಕೆಗಳನ್ನು ಮುಂದಿಟ್ಟಿತ್ತು. ಆದರೆ ಅದು ಬೇಡಿಕೆಯಾಗಿಯೇ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವರ್ಷದ ಬಜೆಟ್ ಗಾತ್ರ 50.65 ಲಕ್ಷ ಕೋಟಿ ಆಗಿದ್ದು, ಇದರಲ್ಲಿ ಸಾಲದ ಮೊತ್ತ 15.68 ಲಕ್ಷ ಕೋಟಿ ಹಾಗೂ ಬಡ್ಡಿ‌ ಪಾವತಿಗೆ 12.70 ಲಕ್ಷ ಕೋಟಿ ನೀಡುತ್ತಿದೆ. ಈ ದೇಶದ ಮೇಲೆ ಸರ್ಕಾರ 202 ಲಕ್ಷ- 205 ಲಕ್ಷ ಕೋಟಿ ಸಾಲ ಹೊರಿಸಿದೆ ಎಂದು ಟೀಕಿಸಿದರು.

ಕರ್ನಾಟಕ ತೆರಿಗೆ ಪಾವತಿಯಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಆದರೆ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಹೆಚ್ಚಿನ ಪಾಲು ನೀಡಲಾಗಿದೆ.  ಇದೊಂದು ರೀತಿ ಬಿಹಾರ ಮತ್ತು ಆಂಧ್ರದ ಬಜೆಟ್ ಇದ್ದಂತಿದೆ. ರಾಜ್ಯದ ಯೋಜನೆಗಳಾದ ಮೇಲೆದಾಟು, ಮಹದಾಯಿ, ಕೃಷ್ಣಾ, ಭದ್ರಾ ಈ ಯಾವ ಯೋಜನೆಗಳಿಗೂ ಅನುದಾನ ನೀಡಿಲ್ಲ ಎಂದು ದೂರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments