ಬಜೆಟ್‌ನಲ್ಲಿ ರಾಜ್ಯಕ್ಕೆ ಬರೀ ಚೊಂಬು: ಸಿಎಂ ಸಿದ್ದರಾಮಯ್ಯ

Sampriya
ಶನಿವಾರ, 1 ಫೆಬ್ರವರಿ 2025 (17:05 IST)
ಮೈಸೂರು: ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕ ಹಾಗೂ ದೇಶದ ಹಿತದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೂರದೃಷ್ಟಿ ಇಲ್ಲದ ಬಜೆಟ್. ಈ ಮೂಲಕ ಮೋದಿ ಸರ್ಕಾರ ಕರ್ನಾಟಕಕ್ಕೆ ಚೆಂಬು ಕೊಡುವುದನ್ನು ಮುಂದುವರಿಸಿದೆ ಎಂದು ಟೀಕೆ ಮಾಡಿದರು.

ಬಜೆಟ್ ಪೂರ್ವಭಾವಿ ಚರ್ಚೆ ವೇಳೆ ಕರ್ನಾಟಕ ಸರ್ಕಾರ ಹಲವು ಬೇಡಿಕೆಗಳನ್ನು ಮುಂದಿಟ್ಟಿತ್ತು. ಆದರೆ ಅದು ಬೇಡಿಕೆಯಾಗಿಯೇ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವರ್ಷದ ಬಜೆಟ್ ಗಾತ್ರ 50.65 ಲಕ್ಷ ಕೋಟಿ ಆಗಿದ್ದು, ಇದರಲ್ಲಿ ಸಾಲದ ಮೊತ್ತ 15.68 ಲಕ್ಷ ಕೋಟಿ ಹಾಗೂ ಬಡ್ಡಿ‌ ಪಾವತಿಗೆ 12.70 ಲಕ್ಷ ಕೋಟಿ ನೀಡುತ್ತಿದೆ. ಈ ದೇಶದ ಮೇಲೆ ಸರ್ಕಾರ 202 ಲಕ್ಷ- 205 ಲಕ್ಷ ಕೋಟಿ ಸಾಲ ಹೊರಿಸಿದೆ ಎಂದು ಟೀಕಿಸಿದರು.

ಕರ್ನಾಟಕ ತೆರಿಗೆ ಪಾವತಿಯಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಆದರೆ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಹೆಚ್ಚಿನ ಪಾಲು ನೀಡಲಾಗಿದೆ.  ಇದೊಂದು ರೀತಿ ಬಿಹಾರ ಮತ್ತು ಆಂಧ್ರದ ಬಜೆಟ್ ಇದ್ದಂತಿದೆ. ರಾಜ್ಯದ ಯೋಜನೆಗಳಾದ ಮೇಲೆದಾಟು, ಮಹದಾಯಿ, ಕೃಷ್ಣಾ, ಭದ್ರಾ ಈ ಯಾವ ಯೋಜನೆಗಳಿಗೂ ಅನುದಾನ ನೀಡಿಲ್ಲ ಎಂದು ದೂರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧದ ಪರಿಣಾಮ ನಿಮ್ಮ ಅಡುಗೆ ಮನೆಗೂ ಬಂತು: ಸಿಲಿಂಡರ್ ಬೆಲೆ ಏರಿಕೆ

ದೀಪ ಬೆಳಗುವಾಗ ರಾಹುಲ್ ಗಾಂಧಿಗೆ ಚಪ್ಪಲಿ ತೆಗೆಯಲು ಸೂಚಿಸಿದ ಕೆಸಿ ವೇಣುಗೋಪಾಲ್ Video

Karnataka weather: ವಾರಂತ್ಯಕ್ಕೆ ಹೇಗಿರಲಿದೆ ಕರ್ನಾಟಕದ ಹವಾಮಾನ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಮುಂದಿನ ಸುದ್ದಿ
Show comments