Webdunia - Bharat's app for daily news and videos

Install App

ಬಜೆಟ್‌ನಲ್ಲಿ ರಾಜ್ಯಕ್ಕೆ ಬರೀ ಚೊಂಬು: ಸಿಎಂ ಸಿದ್ದರಾಮಯ್ಯ

Sampriya
ಶನಿವಾರ, 1 ಫೆಬ್ರವರಿ 2025 (17:05 IST)
ಮೈಸೂರು: ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕ ಹಾಗೂ ದೇಶದ ಹಿತದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೂರದೃಷ್ಟಿ ಇಲ್ಲದ ಬಜೆಟ್. ಈ ಮೂಲಕ ಮೋದಿ ಸರ್ಕಾರ ಕರ್ನಾಟಕಕ್ಕೆ ಚೆಂಬು ಕೊಡುವುದನ್ನು ಮುಂದುವರಿಸಿದೆ ಎಂದು ಟೀಕೆ ಮಾಡಿದರು.

ಬಜೆಟ್ ಪೂರ್ವಭಾವಿ ಚರ್ಚೆ ವೇಳೆ ಕರ್ನಾಟಕ ಸರ್ಕಾರ ಹಲವು ಬೇಡಿಕೆಗಳನ್ನು ಮುಂದಿಟ್ಟಿತ್ತು. ಆದರೆ ಅದು ಬೇಡಿಕೆಯಾಗಿಯೇ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವರ್ಷದ ಬಜೆಟ್ ಗಾತ್ರ 50.65 ಲಕ್ಷ ಕೋಟಿ ಆಗಿದ್ದು, ಇದರಲ್ಲಿ ಸಾಲದ ಮೊತ್ತ 15.68 ಲಕ್ಷ ಕೋಟಿ ಹಾಗೂ ಬಡ್ಡಿ‌ ಪಾವತಿಗೆ 12.70 ಲಕ್ಷ ಕೋಟಿ ನೀಡುತ್ತಿದೆ. ಈ ದೇಶದ ಮೇಲೆ ಸರ್ಕಾರ 202 ಲಕ್ಷ- 205 ಲಕ್ಷ ಕೋಟಿ ಸಾಲ ಹೊರಿಸಿದೆ ಎಂದು ಟೀಕಿಸಿದರು.

ಕರ್ನಾಟಕ ತೆರಿಗೆ ಪಾವತಿಯಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಆದರೆ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಹೆಚ್ಚಿನ ಪಾಲು ನೀಡಲಾಗಿದೆ.  ಇದೊಂದು ರೀತಿ ಬಿಹಾರ ಮತ್ತು ಆಂಧ್ರದ ಬಜೆಟ್ ಇದ್ದಂತಿದೆ. ರಾಜ್ಯದ ಯೋಜನೆಗಳಾದ ಮೇಲೆದಾಟು, ಮಹದಾಯಿ, ಕೃಷ್ಣಾ, ಭದ್ರಾ ಈ ಯಾವ ಯೋಜನೆಗಳಿಗೂ ಅನುದಾನ ನೀಡಿಲ್ಲ ಎಂದು ದೂರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments