Webdunia - Bharat's app for daily news and videos

Install App

ವಕ್ಫ್ ವಿರುದ್ಧ ಇಂದಿನಿಂದ ಬಸನಗೌಡ ಯತ್ನಾಳ್ ನೇತೃತ್ವದಲ್ಲಿ ಹೋರಾಟ

Krishnaveni K
ಸೋಮವಾರ, 25 ನವೆಂಬರ್ 2024 (10:55 IST)
ಬೆಂಗಳೂರು: ಉಪಚುನಾವಣೆ ಫಲಿತಾಂಶದ ಬಳಿಕ ಮತ್ತೆ ಬಿಜೆಪಿಯ ಮತ್ತೊಂದು ಬಣ ವಕ್ಫ್ ವಿರುದ್ಧ ಇಂದಿನಿಂದ ಜನಜಾಗೃತಿ ಹೋರಾಟ ಮಾಡಲು ಹೊರಟಿದೆ. ಇದಕ್ಕೆ ವಿಜಯೇಂದ್ರ ಬಣದಿಂದಲೇ ಪ್ರತಿರೋಧವಿದೆ.
 

ವಕ್ಫ್ ಹೋರಾಟ ವಿಚಾರದಲ್ಲಿ ಮೊದಲಿನಿಂದಲೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಯತ್ನಾಳ್ ಬಣದ ನಡುವೆ ವಾರ್ ನಡೆಯುತ್ತಿತ್ತು. ವಿಜಯೇಂದ್ರ ನೇತೃತ್ವದಲ್ಲಿ ಉಪಚುನಾವಣೆ ಫಲಿತಾಂಶಕ್ಕೆ ಮೊದಲು ಹೋರಾಟ ನಡೆದಿತ್ತು. ಆದರೆ ವಕ್ಫ್ ವಿಚಾರ ಉಪಚುನಾವಣೆ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಿರಲಿಲ್ಲ.

ಇಂದು ಬೀದರ್ ನಿಂದ ಯತ್ನಾಳ್ ನೇತೃತ್ವದ ಮತ್ತೊಂದು ಬಣ ವಕ್ಫ್ ವಿರುದ್ಧ ಹೋರಾಟ ಆರಂಭಿಸಲಿದೆ. ಯತ್ನಾಳ್ ಜೊತೆಗೆ ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ ಮೊದಲಾದ ನಾಯಕರು ಇರಲಿದ್ದಾರೆ. ಈ ಬಣದ ಹೋರಾಟಕ್ಕೆ ಸ್ವತಃ ವಿಜಯೇಂದ್ರ ಬಣದ ವಿರೋಧವಿದೆ.

ಬಿಜೆಪಿ ಮತ್ತೊಂದು ಟೀಂ ಮಾಡಿಕೊಂಡು ವಕ್ಫ್ ಹೋರಾಟ ಮಾಡಬಾರದು ಎಂದು ವಿಜಯೇಂದ್ರ ಅಪಸ್ವರವೆತ್ತಿದ್ದಾರೆ. ಆದರೆ ಇದು ಯಾವುದಕ್ಕೂ ಕಿವಿಯೇ ಕೊಡದೇ ಯತ್ನಾಳ್ ಟೀಂ ಜನಜಾಗೃತಿ ಅಭಿಯಾನ ನಡೆಸಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments