Webdunia - Bharat's app for daily news and videos

Install App

ಗಾಂಧೀಜಿ ರಾಷ್ಟ್ರಪಿತ ಎನ್ನಲು ಅವರೇನು ರಾಷ್ಟ್ರದ ಗಂಡನಾ ಅಂತ ಅಂಬೇಡ್ಕರ್ ಕೇಳಿದ್ದರು: ಯತ್ನಾಳ್ ವಿವಾದ

Krishnaveni K
ಗುರುವಾರ, 14 ನವೆಂಬರ್ 2024 (11:09 IST)
ಬೆಂಗಳೂರು: ಮಹಾತ್ಮಾ ಗಾಂಧೀಜಿ ರಾಷ್ಟ್ರಪತಿ ಎನ್ನುವುದಕ್ಕೆ ಅವರೇನು ದೇಶದ ಗಂಡನಾ ಅಂತ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಕೇಳಿದ್ದರು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೊನ್ನೆಯಷ್ಟೇ ಕಾಂಗ್ರೆಸ್ ನಾಯಕ ಅಜ್ಜಂಪಿರ್ ಖಾದ್ರಿ ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಬಯಸಿದ್ದರು ಎಂಬ ಹೇಳಿಕೆ ನೀಡಿದ್ದರು. ಇದು ವಿವಾದವಾಗುತ್ತಿದ್ದಂತೇ ಕ್ಷಮೆ ಕೇಳಿದ್ದರು. ಅಜ್ಜಂಪಿರ್ ಖಾದ್ರಿ ಹೇಳಿಕೆ ಬಗ್ಗೆ ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ.

‘ಖಾದ್ರಿಗೆ ಬುದ್ಧಿ ಮತ್ತು ಮರ್ಯಾದೆ ಇಲ್ಲ. ಅಜ್ಜಂಪಿರ್ ಖಾದ್ರಿ ಅವರು ಅಂಬೇಡ್ಕರ್ ಬಗ್ಗೆ ಅಧ್ಯಯನ ಮಾಡಿಲ್ಲ. ಅಂಬೇಡ್ಕರ್ ಎಂದೂ ಇಸ್ಲಾಂ ಧರ್ಮಕ್ಕೆ ಸೇರಲು ಬಯಸಲಿಲ್ಲ. ಡಾ. ಅಂಬೇಡ್ಕರ್ ಅವರು ಹಿಂದೂ ವಿರೋಧಿಯಲ್ಲ ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಜೊತೆಗೆ ಅಜ್ಜಂಪಿರ್ ಬಗ್ಗೆ ಟೀಕೆ ನಡೆಸುವ ಭರದಲ್ಲಿ ಮಹಾತ್ಮಾ ಗಾಂಧೀಜಿ ಬಗ್ಗೆಯೂ ಮಾತನಾಡಿದ್ದಾರೆ. ‘ನಮ್ಮ ಜನ ಅಂಬೇಡ್ಕರ್ ವಿಚಾರಧಾರೆ ಓದಿಲ್ಲ. ಅದೇ ದೇಶದ ದುರ್ದೈವ. ಗಾಂಧಿಗಿಂತಲೂ ಅಂಬೇಡ್ಕರ್ ಶ್ರೇಷ್ಠ ಮನುಷ್ಯ.  ಗಾಂಧಿಗೆ ರಾಷ್ಟ್ರಪಿತ ಎನ್ನಬೇಡಿ ಎಂದು ಅಂಬೇಡ್ಕರ್ ಅಂದೇ ಹೇಳಿದ್ದರು. ರಾಷ್ಟ್ರಪಿತ ಹೇಗೆ ಆಗುತ್ತಾರೆ? ದೇಶಕ್ಕೆ ಗಂಡ ಇರ್ತಾನಾ ಎಂದು ಅಂದೇಅಂಬೇಡ್ಕರ್ ಹೇಳಿದ್ದರು’ ಎಂದು ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments