Webdunia - Bharat's app for daily news and videos

Install App

Basangouda Patil Yatnal: ಗುಟುರು ಹಾಕುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಡ್ ಕ್ಲಾಸ್

Krishnaveni K
ಗುರುವಾರ, 5 ಡಿಸೆಂಬರ್ 2024 (09:42 IST)
Photo Credit: X
ನವದೆಹಲಿ: ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ತಾತ್ಕಾಲಿಕವಾಗಿ ಹೈಕಮಾಂಡ್ ಬ್ರೇಕ್ ಹಾಕಿದೆ. ಬಸನಗೌಡ ಪಾಟೀಲ್ ಯತ್ನಾಳ್ ಗೆ ಶಿಸ್ತಿನ ಪಾಠ ಮಾಡಿದೆ. ಇನ್ನು ಮುಂದೆ ಬಹಿರಂಗ ಹೇಳಿಕೆ ನೀಡದಂತೆ ಕ್ಲಾಸ್ ತೆಗೆದುಕೊಂಡಿದೆ.

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಭ್ರಷ್ಟಾಚಾರ, ಹೊಂದಾಣಿಕೆ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಯತ್ನಾಳ್ ಬಹಿರಂಗವಾಗಿಯೇ ಕಿಡಿ ಕಾರುತ್ತಿದ್ದರು. ಅಲ್ಲದೆ ತಮ್ಮದೇ ಬಣ ಕಟ್ಟಿಕೊಂಡು ವಕ್ಫ್ ವಿರುದ್ಧ ಹೋರಾಟ ಶುರು ಮಾಡಿದ್ದರು. ಈ ಕಾರಣಕ್ಕೆ ಅವರಿಗೆ ಬಿಜೆಪಿ ಶಿಸ್ತು ಸಮಿತಿ ದೆಹಲಿಗೆ ಬಂದು ವಿವರಣೆ ನೀಡಲು ಸೂಚಿಸಿತ್ತು.

ದೆಹಲಿಯಲ್ಲಿ ಶಿಸ್ತು ಸಮಿತಿ ಮುಂದೆ ಹಾಜರಾದ ಬಸನಗೌಡ ಪಾಟೀಲ್ ತಮ್ಮ ಅಸಮಾಧಾನಗಳ ಪಟ್ಟಿಯನ್ನು ನೀಡಿದ್ದಾರೆ. ಕೆಲವು ತಟಸ್ಥ ನಾಯಕರಿಗೆ ಒಂದೇ ಕುಟುಂಬದ ಕೈಯಲ್ಲಿ ಬಿಜೆಪಿ ಚುಕ್ಕಾಣಿ ಇರುವುದಕ್ಕೆ ಅಸಮಾಧಾನವಿದೆ ಎಂದು ಯತ್ನಾಳ್ ಮನವರಿಕೆ ಮಾಡಿಕೊಟ್ಟಿದ್ದಾರೆ.

ಇನ್ನು, ಯತ್ನಾಳ್ ಗೆ ಬುದ್ಧಿವಾದ ಹೇಳಿರುವ ಬಿಜೆಪಿ ನಾಯಕರು, ಏನೇ ಇದ್ದರೂ ಅದನ್ನು ಬೀದಿ ಜಗಳ ಮಾಡಿಕೊಳ್ಳುವುದು ಬೇಡ. ಆಂತರಿಕ ವಿಚಾರದ ಬಗ್ಗೆ ಬಹಿರಂಗ ಹೇಳಿಕೆಗಳು ಬೇಡ. ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಿ. ಅದಕ್ಕಾಗಿ ಒಗ್ಗಟ್ಟಾಗಿ ಹೋರಾಟ ಮಾಡಿ ಎಂದು ಸೂಚನೆ ನೀಡಿದ್ದಾರೆ. ಹೈಕಮಾಂಡ್ ಬೇಟಿ ಬಳಿಕ ಹೇಳಿಕೆ ನೀಡಿರುವ ಯತ್ನಾಳ್ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಹೋರಾಟ ಮಾಡಿ, ಆಂತರಿಕ ವಿಚಾರದ ಚರ್ಚೆ ಬೇಡ ಎಂದು ಹೈಕಮಾಂಡ್ ಹೇಳಿದೆ. ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಮುಂದಿನ ಸುದ್ದಿ
Show comments